ಮೊಳಕಾಲ್ಮೂರು: ತಾಲೂಕು ಪಂಚಾಯಿತಿ ಆವರಣದಲ್ಲಿ ಉಚಿತ ಅನ್ನದಾಸೋಹ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಮೇ 23ರ ಬೆಳಗ್ಗೆ 12ಕ್ಕೆ ಚಾಲನೆ ನೀಡಲಿದ್ದಾರೆ.
ಕ್ಷೇತ್ರದ ಜನರಿಗಾಗಿ ಪ್ರತಿದಿನ ಮಧ್ಯಾಹ್ನ 1ರಿಂದ 3ರ ವರೆಗೆ ಅನ್ನದಾಸೋಹ ನಡೆಸುವ ಉದ್ದೇಶದಿಂದ ಕೇಂದ್ರ ಆರಂಭಿಸಲಾಗಿದೆ. ಪಲಾವ್, ರೈಸ್ಬಾತ್, ಪುಳಿಯೊಗರೆ, ಅನ್ನ ಸಾಂಬಾರ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.