ಚೌಡಯ್ಯ ಗಂಗಾಮತಸ್ಥರ ಹೆಗ್ಗುರುತು

blank

ಮೊಳಕಾಲ್ಮೂರು: ಎಲೆಮರೆ ಕಾಯಂತಿರುವ ಗಂಗಾಮತಸ್ಥರನ್ನು ಇಂದು ಸಮಾಜ ಗುರುತಿಸಲು ವಚನಕಾರ ಅಂಬಿಗರ ಚೌಡಯ್ಯ ಕಾರಣರಾಗಿದ್ದಾರೆ ಎಂದು ಸಮಾಜದ ತಾಲೂಕು ಅಧ್ಯಕ್ಷ ಬ್ಯಾಂಕ್ ಹೊನ್ನೂರಪ್ಪ ಹೇಳಿದರು.

ಇಲ್ಲಿನ ತಾಲೂಕು ಕಚೇರಿಯಲ್ಲಿ ಮಂಗಳವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಕಾಯಕ ಯೋಗಿ, ವಚನಕಾರ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಮಾತನಾಡಿದರು.

12ನೇ ಶತಮಾನದ ಬಸವಾದಿ ಶರಣರಲ್ಲಿ ಒಬ್ಬರಾದ ಚೌಡಯ್ಯ, ಸಮಸಮಾಜ ನಿರ್ಮಾಣದ ಅಡಿಗಲ್ಲಾಗಿದ್ದರು. ವಚನಗಳ ಮೂಲಕ ಸಮುದಾಯದಲ್ಲಿದ್ದ ಜಾತೀಯತೆ, ಮೇಲುಕೀಳೆಂಬ ತಾರತಮ್ಯ ನೀತಿ ತೊಡೆದು ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ತಹಸೀಲ್ದಾರ್ ಎಂ. ಬಸವರಾಜ್ ಮಾತನಾಡಿ, ಸತ್ಯ, ನಿಷ್ಠೆ, ಧರ್ಮಮಾರ್ಗದಲ್ಲಿ ನಡೆದು, ಸಮಾಜದಲ್ಲಿನ ಅಂಕುಡೊಂಕುಗಳನ್ನು ಸರಿಪಡಿಸಿ ಹೋದ ವಚನಕಾರರು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ. ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಸಮಾಜದ ಮುಖಂಡರಾದ ಬಿ.ಟಿ. ಹೊನ್ನೂರಪ್ಪ, ಲಕ್ಷ್ಮಣ, ಗೋವಿಂದಪ್ಪ, ಶಿವಕುಮಾರ್, ವೆಂಕಟೇಶ್, ಹೊನ್ನೂರಸ್ವಾಮಿ, ಶ್ರೀರಾಮ್, ನರೇಂದ್ರ, ಶಿರಸ್ತೇದಾರ ಅಂಜಿನಪ್ಪ, ರಂಗಸ್ವಾಮಿ ಇತರರಿದ್ದರು.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…