ಮೊಳಕಾಲ್ಮೂರು: ಲಾಕ್ಡೌನ್ ಆದೇಶ ಪಾಲನೆ ಜತೆಗೆ ಮುಂಜಾಗ್ರತಾ ಕ್ರಮ ಅನುಸರಿಸಿದರೆ ಮಹಾಮಾರಿ ಕರೊನಾ ವೈರಸ್ ತಡೆ ಸಾಧ್ಯವಾಗುತ್ತದೆ ಎಂದು ಸಿವಿಲ್ ನ್ಯಾಯಾಧೀಶೆ ಎಸ್.ನಿರ್ಮಲಾ ಹೇಳಿದರು.
ನ್ಯಾಯಾಲಯ ಆವರಣದಲ್ಲಿ ಶುಕ್ರವಾರ ಹಳ್ಳಿಗರಲ್ಲಿ ಕರೊನಾ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಪ್ರಚಾರ ಆಂದೋನಲಕ್ಕೆ ಚಾಲನೆ ನೀಡಿ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಪಿ.ಪಾಪಯ್ಯ, ಕಾರ್ಯದರ್ಶಿ ಜಿ.ಮಂಜುನಾಥ, ಮಾಜಿ ಅಧ್ಯಕ್ಷ ಪಿ.ಜಿ.ವಸಂತಕುಮಾರ್, ವಕೀಲರಾದ ಅನಂತಮೂರ್ತಿ, ಆನಂದ್, ವೆಂಕಟೇಶ್, ತಿಪ್ಪೇಸ್ವಾಮಿ ಇದ್ದರು.