ಮೊಳಕಾಲ್ಮೂರು: ಕಾರ್ಮಿಕರ ದಿನಾಚರಣೆ ಅಂಗವಾಗಿ ಶುಕ್ರವಾರ ಅಶೋಕ ಸಿದ್ದಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿರುವ 150 ಕಾರ್ಮಿಕರಿಗೆ ಆರೋಗ್ಯ ಇಲಾಖೆಯಿಂದ ಕೋವಿಡ್-19 ತಪಾಸಣೆ ಮಾಡಲಾಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದಪ್ಪ ಮಾತನಾಡಿ, ಕಾರ್ಮಿಕರು ಎಲ್ಲೇ ಕೆಲಸ ಮಾಡಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕರೊನಾ ವೈರಸ್ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದ ಜತೆಗೆ ಮಾಸ್ಕ್ ಧರಿಸಬೇಕು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಪದ್ಮಾವತಿ ಮಾತನಾಡಿ, ಜ್ವರ, ಕೆಮ್ಮು, ನೆಗಡಿ, ಗಂಟಲು ನೋವು ತೊಂದರೆಯಿದ್ದರೆ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ತಿಳಿಸಿದರು.
ಡಾ.ರಾಘವೇಂದ್ರ, ಡಾ.ಚೆನ್ನಬಸವರಾಜು, ಶುಶ್ರೂಷಕಿಯರಾದ ರುಬಿಯಾ, ರೋಜಾ ಇತರರಿದ್ದರು.