More

    ಮೂವರ ಮೇಲೆ ಮಂಗಗಳ ದಾಳಿ, ಇಬ್ಬರ ಪರಿಸ್ಥಿತಿ ಗಂಭೀರ..

    ವಿಜಯಪುರ: ಚಿರತೆ ಮೊದಲಾದ ಕಾಡುಪ್ರಾಣಿಗಳು ನಾಡಿಗೆ ಬರುವುದು, ಮನುಷ್ಯರ ಮೇಲೆ ಎರಗುವುದು ಮುಂತಾದ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಮಂಗಗಳು ಕೂಡ ಮನುಷ್ಯರ ಮೇಲೆ ಮಾರಕ ಎನಿಸುವಂತೆ ದಾಳಿ ನಡೆಸಿದ್ದೂ ಕೂಡ ವರದಿಯಾಗಿದೆ.

    ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ಮಂಗಗಳು ಮೂವರ ಮೇಲೆ ದಾಳಿ ನಡೆಸಿದ್ದು, ಆ ಪೈಕಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಇಲ್ಲಿನ ಹಣಮಂತ ತುಬಾಕಿ ಹಾಗೂ ಇನ್ನಿಬ್ಬರು ಅಪರಿಚಿತರ ಮೇಲೆ ಮಂಗಗಳು ಭಯಂಕರವಾಗಿ ಎರಗಿವೆ.

    ಹಣಮಂತ ಅವರಿಗೆ ನಿಡಗುಂದಿಯ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಿದ್ದು, ಗಂಭೀರ ಗಾಯಾಳುಗಳಾಗಿರುವ ಇಬ್ಬರು ಅಪರಿಚಿತರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    ನಾನು ಆರ್​ಎಸ್​ಎಸ್​ ಸ್ವಯಂಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ: ಸಿ.ಟಿ. ರವಿ

    ಪ್ಲಾಸ್ಟಿಕ್​ ಕಪ್​, ಪ್ಲೇಟ್​, ಸ್ಟ್ರಾಗಳ ಉತ್ಪಾದನೆಯೇ ಬಂದ್​; ಸರ್ಕಾರದಿಂದ ಘೋಷಣೆ

    ಭಾರತದಲ್ಲಿ ಪ್ರತಿನಿತ್ಯ 1,157 ಮಹಿಳೆಯರು ನಾಪತ್ತೆ!; ದೇಶದಲ್ಲಿ ಹೆಚ್ಚಾಗಿದೆ ಸ್ತ್ರೀಯರ ಮಿಸ್ಸಿಂಗ್​ ಕೇಸ್​..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts