ಬೆಂಗಳೂರು: ಈ ಬಾರಿ ವಾಡಿಕೆಯಂತೆ ನೈಋತ್ಯ ಮುಂಗಾರು ಮಾರುತಗಳು ಕೇರಳಕ್ಕೆ ಇಂದು (ಜೂ.3) ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ. ಕೇರಳಕ್ಕೆ ಆಗಮಿಸಿರುವ ಮುಂಗಾರು ಮಾರುತಗಳು ಕರ್ನಾಟಕದ ಕರಾವಳಿಗೆ ಒಂದೆರೆಡು ದಿನಗಳಲ್ಲಿ ಪ್ರವೇಶಿಸಲಿವೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
2020 ರಲ್ಲಿ ಜೂ.1 ರಂದು ಮುಂಗಾರು ಆಗಮಿಸಿತ್ತು. 2019 ರಲ್ಲಿ ಜೂ.8 ರಂದು, 2018 ಮತ್ತು 2017 ರಲ್ಲಿ ಮೇ ಕೊನೆಯ ದಿನಗಳಲ್ಲಿ ಪ್ರವೇಶವಾಗಿತ್ತು. ಈ ಬಾರಿ ವಾಡಿಕೆಗಿಂತ ಮುನ್ನವೇ ಕೇರಳಕ್ಕೆ ಮಾರುತಗಳು ಪ್ರವೇಶಿಸುವ ಸಾಧ್ಯತೆಯಿತ್ತು. ಆದರೆ, ಒಂದೇ ವಾರದಲ್ಲಿ ಸಂಭವಿಸಿದ ಎರಡು ಚಂಡಮಾರುತಗಳು ತೇವಾಂಶಭರಿತ ಮೋಡಗಳನ್ನು ಸೆಳೆದುಕೊಂಡಿದ್ದರಿಂದ ಸ್ವಲ್ಪ ವಿಳಂಬವಾಯಿತು ಎನ್ನಲಾಗಿದೆ.
ಇದನ್ನೂ ಓದಿ: ಮಾತು ಬಾರದ, ಕಿವಿ ಕೇಳದ ಬಾಲಕಿ ಮೇಲೆ ಅತ್ಯಾಚಾರ! ಇಳಿ ಸಂಜೆಯ ಹೊತ್ತಿಗೆ ನಡೆದೇ ಹೋಯಿತು ಘೋರ ಕೃತ್ಯ
48 ಗಂಟೆ ವ್ಯಾಪಕ ಮಳೆ : ರಾಜ್ಯದ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆ ಸುರಿದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಇಲಾಖೆ ಯೆಲ್ಲೋ ಅರ್ಲಟ್ ಘೋಷಿಸಿದೆ.
ಪಟ್ನಾ ಏಮ್ಸ್ ಆಸ್ಪತ್ರೆಯಲ್ಲಿ ಮಕ್ಕಳ ಮೇಲೆ ಕೋವಾಕ್ಸಿನ್ ಪ್ರಯೋಗ ಶುರು
ಸೈಬರ್ ಕಳ್ಳರ ಬ್ಯಾಂಕ್ ಖಾತೆಗೆ ಖಾಕಿ ಲಾಕ್! 112 ಅಥವಾ 100 ಗೆ ಕರೆ ಮಾಡಿ, ಹಣ ಉಳಿಸಿಕೊಳ್ಳಿ!