More

    ಶಾಲೆ ಶುರುವಾದರೆ ಹೆಚ್ಚಿನ ಬಸ್ ಸಂಚಾರ

    ಶಿರಸಿ: ಶಾಲೆ – ಕಾಲೇಜ್​ಗಳು ಅಧಿಕೃತವಾಗಿ ಆರಂಭವಾದ ನಂತರ ಎಲ್ಲ ಗ್ರಾಮೀಣ ಭಾಗದಲ್ಲೂ ಸಾರಿಗೆ ಸಂಚಾರ ಆರಂಭಿಸಲಾಗುವುದು ಎಂದು ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ ಹೇಳಿದರು.
    ಶನಿವಾರ ನಗರದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಈಗಾಗಲೇ ಸಂಸ್ಥೆಯು ಬಸ್​ಗಳ ಸಂಚಾರ ಆರಂಭಿಸಿದೆ. ಬೇಡಿಕೆಯಿಲ್ಲದ ಕಾರಣ ಗ್ರಾಮೀಣ ಭಾಗದಲ್ಲಿ ಬಸ್​ಗಳ ಓಡಾಟ ನಡೆಸಿಲ್ಲ. ಆದರೆ, ಕಾಲೇಜ್​ಗಳು ಆರಂಭವಾದ ಬಳಿಕ ಪಾಸ್​ಗಳನ್ನು ನೀಡಿ, ಗ್ರಾಮೀಣ ಭಾಗಕ್ಕೆ ಸಾರಿಗೆ ಸಂಚಾರ ಕಲ್ಪಿಸಲಾಗುವುದು ಎಂದರು.
    ಕರೊನಾ ಪೂರ್ವದಲ್ಲಿ ಸಂಸ್ಥೆಯಿಂದ 4600 ಬಸ್​ಗಳನ್ನು ಬಿಡಲಾಗುತ್ತಿತ್ತು. ಅಂದಾಜು 17 ಲಕ್ಷ ಕಿ.ಮೀ ಪ್ರತಿ ದಿವಸ ಸಂಚಾರವಿತ್ತು. 22 ಲಕ್ಷ ಪ್ರಯಾಣಿಕರು ಸಂಚಾರ ಕೈಗೊಳ್ಳುತ್ತಿದ್ದರು. ಆದರೆ, ಈಗ 3800 ಬಸ್​ಗಳನ್ನು ಬಿಡುತ್ತಿದ್ದು, 12 ಲಕ್ಷ ಕಿ.ಮೀ. ಓಡಾಟ ಹಾಗೂ 10 ಲಕ್ಷ ಜನರು ಪ್ರಯಾಣಿಸುತ್ತಿದ್ದಾರೆ. ಹಾಗಾಗಿ ಶಾಲೆಗಳು ಆರಂಭಗೊಂಡ ನಂತರ ಬಸ್​ಗಳ ಸಂಚಾರ ಹೆಚ್ಚಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು. ಪ್ರತಿ ದಿನ 1.5 ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಡೀಸೆಲ್ ದರ ಏರಿಕೆ ಕಂಡರೂ ಬಸ್​ನ ಪ್ರಯಾಣ ದರ ಏರಿಕೆ ಮಾಡದ ಕಾರಣ ಸಂಸ್ಥೆ ಸಾಕಷ್ಟು ನಷ್ಟದಲ್ಲಿದೆ. ಇದರಿಂದ ಸರ್ಕಾರಕ್ಕೆ 1100 ಕೋಟಿ ರೂಪಾಯಿ ಅನುದಾನ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರಲ್ಲಿ ನಿವೃತ್ತರಾದ ಸಿಬ್ಬಂದಿ ಪಿಂಚಣಿ ಹಣವನ್ನೂ ನೀಡಬೇಕಾಗಿದೆ ಎಂದರು.
    ಶಿರಸಿ ಹಳೆಯ ಬಸ್ ನಿಲ್ದಾಣ ಮರುನಿರ್ವಣ ಯೋಜನೆಗೆ 7 ಕೋಟಿ ರೂಪಾಯಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಅನುಮೋದನೆ ದೊರೆಯುವ ನಿರೀಕ್ಷೆಯಿದೆ. ನಂತರ ಮುಖ್ಯಮಂತ್ರಿ ಸಮ್ಮುಖದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು. ಅಲ್ಲದೆ, ತಾತ್ಕಾಲಿಕವಾಗಿ ನಿಲ್ದಾಣ ಸುಧಾರಿಸಲು ವಿಭಾಗೀಯ ನಿಯಂತ್ರಣಾಧಿಕಾರಿ ಬಳಿ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts