20ಕ್ಕೂ ಅಧಿಕ ಮನೆಗಳ ಕುಸಿತ

blank

ರಬಕವಿ/ಬನಹಟ್ಟಿ : ತಾಲೂಕಿನಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಗೆ ಮಣ್ಣಿನ ಮನೆಗಳು ಕುಸಿಯುತ್ತಿದ್ದು ಜನರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ.
ಹಾನಿಗೊಳಗಾದ ಮನೆಗಳನ್ನು ಶುಕ್ರವಾರ ಶಾಸಕ ಸಿದ್ದು ಸವದಿ, ತಹಸೀಲ್ದಾರ್ ಎಸ್.ಬಿ. ಇಂಗಳೆ ಖುದ್ದಾಗಿ ಪರಿಶೀಲಿಸಿ ಸುದ್ದಿಗಾರರ ಜತೆ ಮಾತನಾಡಿ, ಹಾನಿಗೊಳಗಾದ ಮನೆಗಳ ಸರ್ವೇ ಕಾರ್ಯ ಮಾಡಿಸಿ ಸೂಕ್ತ ದಾಖಲೆಗಳೊಂದಿಗೆ ಸರ್ಕಾರಕ್ಕೆ ಮಾಹಿತಿ ಒದಗಿಸಲಾಗುವುದು. ಕಳೆದ ಅ.9 ರಿಂದ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದ್ದು ತಾಲೂಕು ವ್ಯಾಪ್ತಿಯಲ್ಲಿ 20ಕ್ಕೂ ಅಧಿಕ ಮನೆಗಳು ಬಿದ್ದಿರುವ ವರದಿಯಾಗಿದೆ ಎಂದರು.

ಮಳೆ ಹಾನಿಗೆ ಮನೆ ಕುಸಿತ ಅಥವಾ ಸಮಸ್ಯೆ ಎದುರಾದಲ್ಲಿ ತಕ್ಷಣವೇ ಕಂದಾಯ ಇಲಾಖೆಯ ಸಹಾಯವಾಣಿ 08353-230555 ನಂಬರ್‌ಗೆ ಸಂಪರ್ಕಿಸಬೇಕು ಎಂದು ತಹಸೀಲ್ದಾರ್ ತಿಳಿಸಿದರು.

ಸೂರಿಲ್ಲದೆ ಪರದಾಡುತ್ತಿರುವ ಕುಟುಂಬಗಳಿಗೆ ಶೀಘ್ರ ಪರಿಹಾರ ಒದಗಿಸುವ ಜತೆಗೆ ಭಾಗಶಃ ಬಿದ್ದಿರುವ ಮನೆಗಳ ಸರ್ವೇ ಕಾರ್ಯ ನಡೆಸಿ ತ್ವರಿತ ಪರಿಹಾರ ಒದಗಬೇಕು ಎಂದು ಮನೆ ಕಳೆದುಕೊಂಡ ಸಂತ್ರಸ್ತರು ಒತ್ತಾಯಿಸಿದರು.

ಶಾಸಕರು, ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ಸಭೆಗಳು ನಡೆದಿವೆ. ಆಯಾ ಗ್ರಾಮ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಹಳೆಯ ಮತ್ತು ಜಂತಿ ಮನೆಗಳು ಬೀಳುವ ಲಕ್ಷಣಗಳನ್ನು ಹೊಂದಿರುವ ಮನೆಗಳಲ್ಲಿ ಜನರು ಸಾಧ್ಯವಾದಷ್ಟು ಮಲಗಬಾರದು. ಹಾನಿಗೊಳಗಾದ ಮನೆಗಳಿಗೆ ಸರ್ಕಾರದ ಆದೇಶದಂತೆ ಸೂಕ್ತ ಪರಿಹಾರ ನೀಡಲಾಗುವುದು.
ಎಸ್.ಬಿ. ಇಂಗಳೆ, ತಹಸೀಲ್ದಾರ್, ರಬಕವಿ-ಬನಹಟ್ಟಿ
Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…