More

    ಈತ ಮಾಡಿರೋ ವಂಚನೆ ಒಂದೆರಡಲ್ಲ, ನೂರಕ್ಕೂ ಹೆಚ್ಚು!; ಆರೋಪಿ ನಟರಾಜ್ ವಿರುದ್ಧ ಸಾಲು ಸಾಲು ದೂರು..

    ಬೆಂಗಳೂರು: ನಾಲ್ಕೈದು ದಿನಗಳ ಹಿಂದಷ್ಟೇ ಬಂಧನಕ್ಕೆ ಒಳಗಾಗಿರುವ ಕರ್ನಾಟಕ ರಾಜ್ಯ ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷ ಬಿ.ಎಂ. ನಟರಾಜ್ ವಿರುದ್ಧ ಸಾಲು ಸಾಲು ದೂರುಗಳು ಬರಲಾರಂಭಿಸಿವೆ.

    ನಿವೇಶನ ಮಾರಾಟದಲ್ಲಿ ವಂಚನೆ ಮಾಡಿರುವ ಆರೋಪದಲ್ಲಿ ನ. 10ರಂದು ನಟರಾಜ್​ನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದರು. ಇದೀಗ ಈತನ ವಿರುದ್ಧ ದೂರುಗಳ ಮಹಾಪೂರವೇ ಹರಿದು ಬರುತ್ತಿದ್ದು, ಇದುವರೆಗೆ ನೂರಕ್ಕೂ ಹೆಚ್ಚು ದೂರುಗಳು ಬಂದಿದ್ದು, ಪೊಲೀಸರು ಅವುಗಳನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ಇದನ್ನೂ ಓದಿ: ಬೆಡ್​ ಕೇಳಿದ ನಟಿಗೆ ಸಿಕ್ಕಿದ್ದು ಅರ್ಧಮಂಚ; ಒಂದು ಕೊಟ್ಟು ಇನ್ನೊಂದು ಕೊಟ್ಟಿಲ್ಲ ಎಂದು ಬೇಸರ..

    ನಟರಾಜ್​ ನಕಲಿ ದಾಖಲೆ ಸೃಷ್ಟಿಸಿ, ಸರ್ವೇ ನಂಬರ್ ಹಾಗೂ ಷೆಡ್ಯೂಲ್ ಬದಲಿಸಿ ಹಲವರಿಗೆ ವಂಚನೆ ಮಾಡಿದ್ದ ಎನ್ನಲಾಗಿದೆ. ಸುಮಾರು 75 ಎಕರೆಯ ಜಾಗದಲ್ಲಿ ಸೈಟ್​ಗಳನ್ನು ಮಾಡಿ, ಒಂದೇ ಸೈಟನ್ನು ಹಲವರಿಗೆ ಮಾರಾಟ ಮಾಡಿರುವ ಆರೋಪ ಈತನ ಮೇಲಿದೆ. ಆರೋಪಿಯನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

    ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts