More

    ಹಿಜ್ಬುಲ್​ ಮುಜಾಹಿದ್ದೀನ್​ನ ಮೋಸ್ಟ್​ ವಾಂಟೆಡ್​ ಉಗ್ರ ಸೆರೆ; ಈತ ಕಾಶ್ಮೀರಿ ಪಂಡಿತರನ್ನು ವಾಪಸ್​ ಕರೆದಿದ್ದ…!

    ಶ್ರೀನಗರ: ಹಿಜ್ಬುಲ್‌ ಮುಜಾಹಿದ್ದೀನ್ ಉಗ್ರ ಸಂಘಟನೆಯನ್ನು ಉನ್ನತ ಕಮಾಂಡರ್​, ಮೋಸ್ಟ್​ ವಾಂಟೆಡ್​ ಲಿಸ್ಟ್​ನಲ್ಲಿದ್ದ ಉಗ್ರ ರಿಯಾಜ್ ನಾಯ್ಕೂ ಭಾರತೀಯ ಸೇನೆಯ ಬಲೆಗೆ ಬಿದ್ದಿದ್ದಾನೆ.

    ದಕ್ಷಿಣ ಕಾಶ್ಮೀರದ ಆವಂತಿಪುರದ ಬೀಗ್ಪೊರಾದಲ್ಲಿರುವ ರಿಯಾಜ್​ನ ಗ್ರಾಮದಲ್ಲಿಯೇ ಪೊಲೀಸರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಮಂಗಳವಾರ ತಡರಾತ್ರಿ ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ರಿಯಾಜ್​ ಸಿಕ್ಕಿಬಿದ್ದಿದ್ದಾನೆ.

    ಜಮ್ಮು-ಕಾಶ್ಮೀರ ಪೊಲೀಸರು, 55 ರಾಷ್ಟ್ರೀಯ ರೈಫಲ್ಸ್​ ಟೀಂ ಮತ್ತು ಸಿಆರ್​​ಪಿಎಫ್​ ಯೋಧರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು.

    ರಿಯಾಜ್​ ತನ್ನ ಊರಲ್ಲೇ ಅಡಗಿದ್ದಾನೆ ಎಂಬ ಖಚಿತ ಮಾಹಿತಿ ಸಿಕ್ಕಿದ್ದರಿಂದಲೇ ಆತನನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ಮಾಡಲಾಗಿತ್ತು. ರಿಯಾಜ್​ ಜತೆ ಇನ್ನೂ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

    ಇದನ್ನೂ ಓದಿ: ಉಗ್ರರಿಂದ ಜನರನ್ನು ರಕ್ಷಿಸಿ ಹುತಾತ್ಮರಾದ ಐವರು ಭಾರತೀಯ ಯೋಧರು

    ಸದ್ಯ ಸ್ಥಳದಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಲಾಗಿದ್ದು, ಮೊಬೈಲ್​, ಇಂಟರ್​ನೆಟ್​ ಸೇವೆಗಳನ್ನು ಬಂದ್ ಮಾಡಲಾಗಿದೆ.

    ಈ ಮೋಸ್ಟ್​ ವಾಂಟೆಡ್​ ಉಗ್ರ ರಿಯಾಜ್​ ಬಗ್ಗೆ ಮಾಹಿತಿ ಇಲ್ಲಿದೆ…

    ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರ ಸಂಘಟನೆಯ ಹಳೇ ಮುಖಂಡರಲ್ಲಿ ಒಬ್ಬ ರಿಯಾಜ್​ ನಾಯ್ಕೂ.
    ರಿಯಾಜ್​ ಎ++ (ಉನ್ನತ ದರ್ಜೆ) ಕೆಟೆಗರಿಯ ಉಗ್ರ. ಈತನ ಸುಳಿವು ನೀಡಿದವರಿಗೆ 12 ಲಕ್ಷ ರೂ.ನೀಡುವುದಾಗಿ ಈ ಹಿಂದೆಯೇ ಘೋಷಿಸಲಾಗಿತ್ತು.

    ಆವಂತಿಪುರ ಜಿಲ್ಲೆಯ ರಿಯಾಜ್​ ನಾಯ್ಕೂ ಅನೇಕ ಪೊಲೀಸರು, ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿ.

    ಇದನ್ನೂ ಓದಿ: ಉಗ್ರರೊಂದಿಗಿನ ಕಾದಾಟದಲ್ಲಿ ಹುತಾತ್ಮರಾದ ಪತಿ ಮೃತದೇಹದ ಮುಂದೆ ಪತ್ನಿಯ ಶೋಕ: ಭಾವುಕರಾದ ನೆಟ್ಟಿಗರು

    2016ರ ಜನವರಿಯಲ್ಲಿ ಮೊದಲ ಬಾರಿಗೆ ಈತ ಮುನ್ನೆಲೆಗೆ ಬಂದಿದ್ದಾನೆ. ಎನ್​ಕೌಂಟರ್​​ನಲ್ಲಿ ಹತ್ಯೆಯಾಗಿದ್ದ ಉಗ್ರ ಶರೀಕ್​ ಅಹ್ಮದ್ ಭಟ್​ನ ಅಂತ್ಯಕ್ರಿಯೆಯಲ್ಲಿ ಕಾಣಿಸಿಕೊಂಡಿದ್ದ. ಅಹ್ಮದ್​ ಮೃತದೇಹವನ್ನು ಹೊತ್ತು ತರುವಾಗ ನಾಯ್ಕೂ ಹಲವು ಬಾರಿ ಗಾಳಿಯಲ್ಲಿ ಗುಂಡು ಹೊಡೆದಿದ್ದ. ಈ ಮೂಲಕ ಮೃತ ಉಗ್ರನಿಗೆ ಗೌರವ ಸಲ್ಲಿಸಿದ್ದ.

    2017ರಲ್ಲಿ ರಿಯಾಜ್​ ಒಂದು ವಿಡಿಯೋ ಮಾಡಿ ಹರಿಬಿಟ್ಟಿದ್ದ. ಅದರಲ್ಲಿ ಕಾಶ್ಮೀರಿ ಪಂಡಿತರನ್ನು ವಾಪಸ್​ ಬರುವಂತೆ ಕೇಳಿಕೊಂಡಿದ್ದ. ಅಲ್ಲದೆ, ಉಗ್ರರು ಕಾಶ್ಮೀರಿ ಪಂಡಿತರಿಗೆ ಶತ್ರುಗಳಲ್ಲ ಎಂದು ಹೇಳಿದ್ದ. (ಏಜೆನ್ಸೀಸ್​)

    ಇದನ್ನೂ ಓದಿ: ಶ್ರೀನಗರದಲ್ಲಿ ಉಗ್ರರಿಂದ ಗ್ರೆನೇಡ್​ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿ ಸೇರಿದಂತೆ ನಾಲ್ವರಿಗೆ ಗಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts