ಕೊಡಗು: ದನವನ್ನು ಮೇಯಿಸಲು ಹೋಗಿದ್ದಾಗ ನೀರುಪಾಲಾಗುತ್ತಿದ್ದ ಮಗನನ್ನು ರಕ್ಷಿಸಲು ಧಾವಿಸಿದ್ದ ತಾಯಿಯೂ ಆತನೊಂದಿಗೆ ನೀರುಪಾಲಾದ ಘಟನೆ ನಡೆದಿದ್ದು, ಇದೀಗ ಒಂದು ದಿನದ ಬಳಿಕ ಪುತ್ರನ ಶವವೂ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಿನ್ನೆ ಈ ದುರ್ಘಟನೆ ನಡೆದಿತ್ತು.
ತಾಯಿ ರೇವತಿ ಹಾಗೂ ಆಕೆಯ ಪುತ್ರ, 12 ವರ್ಷದ ಕಾರ್ಯಪ್ಪ ನೀರುಪಾಲಾಗಿ ಮೃತಪಟ್ಟವರು. ಇವರು ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಸಿ. ಪ್ರಕಾಶ್ ಎಂಬವರ ಪತ್ನಿ ಹಾಗೂ ಪುತ್ರ. ಇದೇ ಗ್ರಾಮದ ಲಕ್ಷ್ಮಣತೀರ್ಥ ನದಿಯಲ್ಲಿ ಈ ದುರಂತ ಸಂಭವಿಸಿತ್ತು.
ಸ್ಥಳೀಯರು ನಿನ್ನೆ ರಕ್ಷಣಾ ಕಾರ್ಯಾಚರಣೆಗೆ ಮುಂದಾದರೂ ಅಷ್ಟರಲ್ಲಾಗಲೇ ರೇವತಿ ಸಾವಿಗೀಡಾಗಿದ್ದು, ಅವರ ಶವವವನ್ನು ಹೊರತೆಗೆಯಲಾಗಿತ್ತು. ಆದರೆ ನಿನ್ನೆ ಇಡೀ ಜಾಲಾಡಿದರೂ ಪುತ್ರನ ಪತ್ತೆ ಆಗಿರಲಿಲ್ಲ. ಇಂದೂ ಶೋಧ ಮುಂದುವರಿಸಿದಾಗ ಪುತ್ರನ ಶವ ಸಿಕ್ಕಿದೆ.
ಡಾಕ್ಟರ್ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್
ಅವನನ್ನು ಲವ್ ಮಾಡ್ಬೇಡ ಅಂದ್ರೂ ಕೇಳದ ಮಗಳನ್ನು ಕೊಲೆ ಮಾಡಿದ ಅಪ್ಪ; ವೇಲ್ನಿಂದ ಕತ್ತು ಸುತ್ತಿ ಸಾಯಿಸಿದ..