More

    ಮಗನನ್ನು ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ತಾಯಿ; ಒಂದು ದಿನದ ಬಳಿಕ ಪುತ್ರನೂ ಶವವಾಗಿ ಪತ್ತೆ

    ಕೊಡಗು: ದನವನ್ನು ಮೇಯಿಸಲು ಹೋಗಿದ್ದಾಗ ನೀರುಪಾಲಾಗುತ್ತಿದ್ದ ಮಗನನ್ನು ರಕ್ಷಿಸಲು ಧಾವಿಸಿದ್ದ ತಾಯಿಯೂ ಆತನೊಂದಿಗೆ ನೀರುಪಾಲಾದ ಘಟನೆ ನಡೆದಿದ್ದು, ಇದೀಗ ಒಂದು ದಿನದ ಬಳಿಕ ಪುತ್ರನ ಶವವೂ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಿನ್ನೆ ಈ ದುರ್ಘಟನೆ ನಡೆದಿತ್ತು.

    ತಾಯಿ ರೇವತಿ ಹಾಗೂ ಆಕೆಯ ಪುತ್ರ, 12 ವರ್ಷದ ಕಾರ್ಯಪ್ಪ ನೀರುಪಾಲಾಗಿ ಮೃತಪಟ್ಟವರು. ಇವರು ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಸಿ. ಪ್ರಕಾಶ್ ಎಂಬವರ ಪತ್ನಿ ಹಾಗೂ ಪುತ್ರ. ಇದೇ ಗ್ರಾಮದ ಲಕ್ಷ್ಮಣತೀರ್ಥ ನದಿಯಲ್ಲಿ ಈ ದುರಂತ ಸಂಭವಿಸಿತ್ತು.

    ಸ್ಥಳೀಯರು ನಿನ್ನೆ ರಕ್ಷಣಾ ಕಾರ್ಯಾಚರಣೆಗೆ ಮುಂದಾದರೂ ಅಷ್ಟರಲ್ಲಾಗಲೇ ರೇವತಿ ಸಾವಿಗೀಡಾಗಿದ್ದು, ಅವರ ಶವವವನ್ನು ಹೊರತೆಗೆಯಲಾಗಿತ್ತು. ಆದರೆ ನಿನ್ನೆ ಇಡೀ ಜಾಲಾಡಿದರೂ ಪುತ್ರನ ಪತ್ತೆ ಆಗಿರಲಿಲ್ಲ. ಇಂದೂ ಶೋಧ ಮುಂದುವರಿಸಿದಾಗ ಪುತ್ರನ ಶವ ಸಿಕ್ಕಿದೆ.

    ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್

    ಅವನನ್ನು ಲವ್​ ಮಾಡ್ಬೇಡ ಅಂದ್ರೂ ಕೇಳದ ಮಗಳನ್ನು ಕೊಲೆ ಮಾಡಿದ ಅಪ್ಪ; ವೇಲ್​​ನಿಂದ ಕತ್ತು ಸುತ್ತಿ ಸಾಯಿಸಿದ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts