More

    ಮೂರು ದಿನಗಳಿಂದ ಮನೆಯಲ್ಲಿರದ ಪತಿ; ಮನೆಯಲ್ಲಿದ್ದ ಮೂವರೂ ಇನ್ನಿಲ್ಲ!

    ವಿಜಯನಗರ: ಪತಿ ಮೂರು ದಿನಗಳಿಂದ ಮನೆಯಲ್ಲಿರದ ಸಂದರ್ಭದಲ್ಲಿ ಆಗಬಾರದ್ದು ಆಗಿಹೋಗಿದೆ. ಪರಿಣಾಮವಾಗಿ ಮನೆಯಲ್ಲಿದ್ದ ಮೂವರೂ ಇನ್ನಿಲ್ಲ ಎಂಬಂತಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.

    ಹರಪನಹಳ್ಳಿ ತಾಲೂಕಿನ ನೀಲಗುಂದ ಗ್ರಾಮದ ವೀರೇಶ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಪತ್ನಿ ಭವ್ಯಾ, ಪುತ್ರಿಯರಾದ ಕಾವ್ಯ ಮತ್ತು ಅಮೂಲ್ಯ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ. ವೀರೇಶ್ ಮೂರು ದಿನಗಳಿಂದ ಮನೆಯಲ್ಲಿ ಇರಲಿಲ್ಲ, ಈ ಸಂದರ್ಭದಲ್ಲಿ ಈ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ತಾಯಿ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣಕ್ಕೆ ಈ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ಹಲವಾಗಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್ ತನಿಖೆ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಿದೆ.

    ಇಬ್ಬರು ವಯಸ್ಕ ಪುತ್ರಿಯರ ಜತೆ ನದಿಗೆ ಹಾರಿದ ತಾಯಿ; ಮೂವರ ಶವವೂ ಪತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts