More

    ಇಬ್ಬರು ವಯಸ್ಕ ಪುತ್ರಿಯರ ಜತೆ ನದಿಗೆ ಹಾರಿದ ತಾಯಿ; ಮೂವರ ಶವವೂ ಪತ್ತೆ

    ಬಾಗಲಕೋಟೆ: ವಯಸ್ಸಿಗೆ ಬಂದ ಹೆಣ್ಣುಮಕ್ಕಳಿಬ್ಬರ ಸಹಿತ ತಾಯಿಯೊಬ್ಬರು ನದಿಗೆ ಹಾರಿದ ಪ್ರಕರಣವೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ಈ ಪ್ರಕರಣ ನಡೆದಿದ್ದು, ಡೆತ್​ನೋಟ್ ಕೂಡ ಪತ್ತೆಯಾಗಿದೆ.

    ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಸೂಳೇಬಾವಿ ಗ್ರಾಮದ ಉಮಾ ಸುರೇಶ ಮಾಸರೆಡ್ಡಿ (42) ಎಂಬಾಕೆ ತನ್ನ ಮಕ್ಕಳಾದ ಐಶ್ವರ್ಯ (23) ಹಾಗೂ ಸೌಂದರ್ಯ (19) ಅವರೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮತಗಿ ಪಟ್ಟಣದ ಮಲಪ್ರಭಾ ಸೇತುವೆ ಬಳಿ ಇವರ ಶವ ಪತ್ತೆಯಾಗಿದೆ.

    ಪುತ್ರಿಯರಲ್ಲಿ ಐಶ್ವರ್ಯ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಹಾಗೂ ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್​ಸಿ ವ್ಯಾಸಂಗ ಮಾಡುತ್ತಿದ್ದು, ತಾಯಿ ಡೆತ್​ನೋಟ್ ಬರೆದಿಟ್ಟು, ಇಬ್ಬರೂ ಪುತ್ರಿಯರೊಂದಿಗೆ ನದಿಗೆ ಹಾರಿದ್ದರು. ಕೌಟುಂಬಿಕ ಸಮಸ್ಯೆಯಿಂದ ಈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶವ ಪತ್ತೆ ಮಾಡಿದ್ದಾರೆ. ಡೆತ್​ನೋಟ್​ನಲ್ಲಿ ಏನಿದೆ ಎಂಬುವುದು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಅಮೀನಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಜಿಮ್​ನಲ್ಲಿ ಮಾತಾಡ್ತ ಮಾತಾಡ್ತ ಕುಸಿದು ಬಿದ್ದು ಸಾವಿಗೀಡಾದ ಬಾಡಿಬಿಲ್ಡರ್!

    ನಿಶ್ಚಿತಾರ್ಥವಾಗಿದ್ದರೂ ಮನೆಬಿಟ್ಟು ಹೋಗಿ ಪ್ರಿಯಕರನನ್ನೇ ವರಿಸಿದಳು; ಸಹೋದರರಿಬ್ಬರು ಆಕೆಯ ಪತಿಯನ್ನೇ ಕೊಂದರು

    ‘ಅಭಿಮಾನಿ ದೇವರುಗಳೇ.. ನಮಸ್ಕಾರ ದೇವರು’: ಡಾ.ರಾಜ್​ ಆದರ್ಶದ ಡಾ.ಬ್ರೋ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts