More

    ಇಬ್ಬರು ಹೆಣ್ಣುಮಕ್ಕಳ ಜತೆ ಬಾವಿಗೆ ಹಾರಿದ ತಾಯಿ: ಓರ್ವ ಬಾಲಕಿ ಪಾರು, ಚಿಕ್ಕಬಳ್ಳಾಪುರದಲ್ಲಿ ಕರುಣಾಜನಕ ಘಟನೆ

    ಚಿಕ್ಕಬಳ್ಳಾಪುರ: ತಾಯಿಯೊಬ್ಬಳು ತನ್ನಿಬ್ಬರು ಹೆಣ್ಣು ಮಕ್ಕಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ನಡೆದಿದೆ. ಅದೃಷ್ಟವಶಾತ್​ ಓರ್ವ ಹೆಣ್ಣು ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

    ತಾಯಿ ನಾಗಮ್ಮ (38) ಹಾಗೂ ಮಗಳು ಶ್ರೀನಿಧಿ (5) ದುರಂತ ಸಾವಿಗೀಡಾಗಿದ್ದರೆ, 7 ವರ್ಷದ ಗಂಗೋತ್ರಿ ಬಾವಿಯಿಂದ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿಯಿರುವ‌ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ರಾಜ್ಯ ಸರ್ಕಾರ ತಾತ್ಸಾರ, ಜನರ ಬದುಕು ದುರ್ಬರ: ಮಾಜಿ ಸಿಎಂ ಬೊಮ್ಮಾಯಿ ಕಿಡಿ; ಎರಡನೇ ದಿನವೂ ಕಲಾಪ ಬಹಿಷ್ಕಾರ, ಧರಣಿ

    ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳಿಗಾಗಿ ಆಗ್ನಿಶಾಮಕದಳ ಶೋಧ ಕಾರ್ಯ ನಡೆಸುತ್ತಿದೆ, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಆಗಸ್ಟ್​ 1ರಿಂದ ಹಾಲಿನ ದರ ಏರಿಕೆ ಬರೆ: ನಂದಿನಿ ಹಾಲಿನ ದರ ಎಷ್ಟೆಷ್ಟು ಹೆಚ್ಚಾಗಲಿದೆ? ಇಲ್ಲಿದೆ ಮಾಹಿತಿ…

    ಎಚ್ಚರ…! ಶುರುವಾಯ್ತು ಡೆಂಘೆ ಹಾವಳಿ: ರಾಜ್ಯದಲ್ಲಿ ಹೆಚ್ಚಿದ ಪ್ರಕರಣಗಳು; 21 ದಿನದಲ್ಲಿ 1,813 ಮಂದಿಗೆ ಸೋಂಕು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts