ಬೆಳಗಾವಿ: ಮಕ್ಕಳಿಬ್ಬರೊಂದಿಗೆ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕರುಣಾಜನಕ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಹಿಂಡಲಗಾ ಗಣಪತಿ ಮಂದಿರ ಬಳಿಯ ಕೆರೆಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿಯ ಸಹ್ಯಾದ್ರಿ ನಗರದ ಕೃಷಾ (36), ಭಾವಿರಾ (4) ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಇನ್ನೊಬ್ಬ ಮಗ ವೀರನ್ಗಾಗಿ ನೀರಿನಲ್ಲಿ ಹುಡುಕಾಟ ನಡೆಯುತ್ತಿದೆ.
ಮೃತರಾದವರ ಕುರಿತ ಹೆಚ್ಚಿನ ವಿವರ ಹಾಗೂ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
‘ಬೆಳಗಾವಿ ಕರ್ನಾಟಕದ್ದೇ, ಇಲ್ಲಿಯ ಮೂಲಭಾಷೆ ಕನ್ನಡವೇ’: ಸಿಕ್ಕಿದೆ ಬ್ರಿಟಿಷರ ಕಾಲದ ಮತ್ತೊಂದು ಮಹತ್ವದ ಕನ್ನಡ ದಾಖಲೆ