ಮೈಸೂರು: ಎರಡು ವರ್ಷದ ಮಗನನ್ನು ಕೈಯಾರೆ ಕೊಂದ ತಾಯಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಪ್ರಕರಣವೊಂದು ವರದಿಯಾಗಿದೆ. ನಂಜನಗೂಡಿನ ಗಟ್ಟವಾಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಗಟ್ಟವಾಡಿ ಗ್ರಾಮದ ಮಹದೇವ ಪ್ರಸಾದ್ ಅಲಿಯಾಸ್ ರಚ್ಚು ಎಂಬುವರ ಪತ್ನಿ ಅನ್ನಪೂರ್ಣ (22) ಮತ್ತು ಪುತ್ರ ಮೋಕ್ಷಿತ್ (2) ಸಾವಿಗೀಡಾದವರು. ಅನ್ನಪೂರ್ಣ ಮೊದಲು ಮಗನನ್ನು ಒಂದು ಬಕೆಟ್ ನೀರಿನಲ್ಲಿ ಮುಳುಗಿಸಿ ಸಾಯಿಸಿದ್ದಾಳೆ. ಬಳಿಕ ತಾನು ನೇಣು ಹಾಕಿಕೊಂಡಿದ್ದಾಳೆ.
ಇದನ್ನೂ ಓದಿ: ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ಸತ್ತ ಚಾಲಕ; ದೇಹ ನೂರು ಮೀಟರ್ ದೂರ ಎಳೆದೊಯ್ದ ಮೇಲೆ ನಿಂತಿತು ವಾಹನ
ಚಾಮರಾಜನಗರ ಜಿಲ್ಲೆ ಉಮ್ಮತ್ತೂರು ಗ್ರಾಮದ ಈಕೆ ಎರಡು ವರ್ಷಗಳ ಹಿಂದೆ ಮಹದೇವ ಪ್ರಸಾದ್ನನ್ನು ವಿವಾಹವಾಗಿದ್ದಳು. ದಂಪತಿ ಮಧ್ಯೆ ಆಗಾಗ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಆಗುತ್ತಿತ್ತು, ಅದೇ ಕಾರಣಕ್ಕೆ ಬೇಸತ್ತು ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಇದನ್ನೂ ಓದಿ: ಅನೈತಿಕ ಸಂಬಂಧ, ಗಂಡನೇ ಕೊಂದ!?; ಜೋಡಿ ಕೊಲೆ ಪ್ರಕರಣ, ಒಬ್ಬನ ಬಂಧನ…
ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ಗೋವಿಂದರಾಜು, ವೃತ್ತ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ, ದೊಡ್ಡಕವಲಂದೆ ಸಬ್ ಇನ್ಸ್ಪೆಕ್ಟರ್ ಮಹೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿಯ ಶೀರ್ಷಿಕೆ ತಿರುಚಿದ ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು