ಮೈಸೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರಮಂದಿರಗಳು ಚಿತ್ರಪ್ರದರ್ಶನ ನಿಲ್ಲಿಸಿವೆ. 2.30 ರ ಶೋ ಮತ್ತು 4.30 ರ ಶೋಗಳನ್ನು ರದ್ದುಪಡಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಹಾಮಂಡಲದ ಉಪಾಧ್ಯಕ್ಷ ರಾಜಾರಾಮ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರರಂಗ ಮೊದಲು ಈ ಶಾಕ್ನಿಂದ ಹೊರ ಬರಬೇಕು. ಮುಂದೆ ಯಾವಾಗ ಚಿತ್ರ ಪ್ರದರ್ಶನ ಮಾಡಬೇಕು ನೋಡೋಣ ಎಂದರು.
“ಪುನೀತ್ ಜತೆ ನಾನು ಚಾಮುಂಡಿ ಬೆಟ್ಟ ಹತ್ತಿ ಇಳಿಯುತ್ತಿದ್ದೆ. ಅವರು ಆರೋಗ್ಯದ ಬಗ್ಗೆ ಗಮನ ಹರಿಸುತ್ತಿದ್ದರು. ಅವರಿಗೆ ಹೀಗೆ ಆಗಿರೋದು ಅರಗಿಸಿಕೊಳ್ಳಲು ಆಗುತ್ತಿಲ್ಲ” ಎಂದು ರಾಜಾರಾಮ್ ಭಾವುಕರಾಗಿ ನುಡಿದರು.
ಛೇ, ಇದೆಂಥಾ ಶಾಲೆ?! ಚೇಷ್ಟೆ ಮಾಡಿದ ವಿದ್ಯಾರ್ಥಿಯನ್ನು ನೇತಾಡಿಸಿ ಶಿಕ್ಷೆ!
ಇನ್ನು ಈ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಭಾರೀ ಅಗ್ಗ! ವರ್ಷಕ್ಕೆ ಒಂದೂವರೆ ಲಕ್ಷ ರೂ. ಮಾತ್ರ