More

    ಗಣೇಶೋತ್ಸವ ಐಕ್ಯತೆ ಪ್ರತೀಕ: ಸಂಗಣ್ಣ ಕರಡಿ

    ಕೊಪ್ಪಳ: ಗಣೇಶೋತ್ಸವ ಐಕ್ಯತೆಯ ಪ್ರತೀಕ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

    ನಗರದಲ್ಲಿ ಹಿಂದೂ ಮಹಾ ಮಂಡಳಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಆಚರಿಸುವ ಗಣೇಶೋತ್ಸವಕ್ಕೆ ಭಾನುವಾರ ಹಮ್ಮಿಕೊಂಡಿದ್ದ ಹಾಲಕಂಬ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು.

    ಭಕ್ತಿ ಹಾಗೂ ಭಾವೈಕ್ಯತೆಯ ಹಿನ್ನೆಲೆಯಲ್ಲಿ ಬಾಲಗಂಗಾಧರ ತಿಲಕರ ಮುಂದಾಳತ್ವದಲ್ಲಿ ಹುಟ್ಟಿ ಬೆಳೆದ ಗಣೇಶ ಹಬ್ಬವು ಇಂದು ನಮ್ಮೆಲ್ಲರ ಅಚ್ಚುಮೆಚ್ಚಿನ ಹಬ್ಬವಾಗಿದೆ. ಚದುರಿ ಹೋಗಿದ್ದ ಅಂದಿನ ಅನಕ್ಷರಸ್ಥ ಸಮಾಜದಲ್ಲಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಜನರನ್ನು ಒಂದೇ ವೇದಿಕೆಯಡಿ ಏಕೀಕರಣಗೊಳಿಸಲು ತಿಲಕರು ಆಯ್ಕೆ ಮಾಡಿದ್ದೇ ಈ ಗಣೇಶ ಹಬ್ಬ.

    ತಿಲಕರ ಕರೆಗೆ ಜಾತಿ-ಮತ ಬೇಧವಿಲ್ಲದೆ ಬಹುಬೇಗನೆ ಜನರು ಸ್ಪಂದಿಸಿದರು. ದೇಶಾದ್ಯಂತ ಭಕ್ತಿಯ ಪ್ರವಾಹ ಹರಿಯುವುದರೊಂದಿಗೆ ಬ್ರಿಟಿಷರಿಗೆ ನಮ್ಮ ಏಕತೆಯ ಬಿಸಿಯನ್ನೂ ಮುಟ್ಟಿಸಿತು ಎಂದರು.

    ಹಿಂದೂ ಮಹಾ ಮಂಡಳಿಯಿಂದ ಪ್ರತಿ ವರ್ಷ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಪ್ರತಿದಿನ ಒಂದೊಂದ ಕಾರ್ಯಕ್ರಮ ಇರಲಿದ್ದು, ಜನತೆ ಭಾಗವಹಿಸಿ ಯಶಸ್ವಿಗೊಳಿಸಬೇಕು. ಗಣೇಶೋತ್ಸವ ಹಿಂದುಗಳ ಹಬ್ಬ ಮಾತ್ರವಲ್ಲ ಎಲ್ಲ ಜನಾಂಗದ ಹಬ್ಬವಾಗಿದೆ. ರಾಜ್ಯಕ್ಕೆ ಮಾದರಿಯಾಗಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದರು.

    ಜಾತಿ-ಜಾತಿಗಳ ನಡುವೆ ಅಂತರ ತುಂಬಲು, ಅವರ ನಡುವೆ ಕೆಳಹಂತದಲ್ಲಿ ಐಕ್ಯತೆ ಮೂಡಿಸುವುದೇ ಗಣೇಶೋತ್ಸವ. ಇದೊಂದು ರಾಷ್ಟ್ರೀಯ ಹಬ್ಬವಾಗಿದೆ. ಗಣೇಶ ಪ್ರತಿಯೊಬ್ಬರ ಪಾಲಿಗೂ ದೇವಸ್ವರೂಪಿಯಾಗಿದ್ದು, ಕೊಪ್ಪಳ ಜಿಲ್ಲೆಯ ಜನತೆ ವಿಜೃಂಭಣೆಯಿಂದ ಶಾಂತಿಯುತವಾಗಿ ಆಚರಿಸಬೇಕು ಎಂದರು.

    ನಮ್ಮ ಬಿಜೆಪಿ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯಾದ್ಯಂತ ಗಣೇಶೋತ್ಸವ ಆಚರಿಸಲಾಗಿದೆ. ಅದರಂತೆಯೇ ಕಾಂಗ್ರೆಸ್ ಸರ್ಕಾರ ಶಾಂತಿಯುತವಾಗಿ ಆಚರಿಸಲು ಹಾಗೂ ಯಾವುದೇ ನಿಯಮ ಮತ್ತು ಷರತ್ತು ಹಾಕದೇ ಹಬ್ಬ ಆಚರಿಸಲು ಅನುವು ಮಾಡಿಕೊಡಬೇಕು. ಪೊಲೀಸ್ ಕಣ್ಗಾವಲು ಜತೆಗೆ ಸ್ವಾತಂತ್ರ್ಯ ವಾಗಿ ಆಚರಿಸಲು ಅವಕಾಶ ನೀಡಬೇಕು ಎಂದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts