More

    ಸಂಸದ ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಿದವರ ಸೆರೆ

    ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ, ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿದ್ದು, ಈ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ.

    ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪರ ನಗ0ರದ ಟೌನ್​ಹಾಲ್​ ಬಳಿ ಪ್ರತಿಭಟನೆ ನಡೆಸುತ್ತಿದ್ದ ಆರ್​ಎಸ್​ಎಸ್​ ಕಾರ್ಯಕರ್ತ ವರುಣ್​ ಎಂಬುವವರ ಮೇಲೆ ಹಲ್ಲೆ ನಡೆಸಿದ ತಂಡವನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಈ ವಿಷಯ ಬಯಲಿಗೆ ಬಂದಿದೆ.

    ಸಾದಿಕ್​ ಅಲಿಯಾಸ್​ ಸೌಂಡ್​ ಸಾದಿಕ್​, ಅಕ್ಬರ್​, ಇರ್ಫಾನ್​, ಸಿದ್ಧಿಕ್​, ಸನಾ ಹಾಗೂ ಅಕ್ಬರ್​ ಬಂಧಿತರು. ನೋಂದಣಿ ಸಂಖ್ಯೆಗೆ ಮಸಿ ಬಳಿದುಕೊಂಡು ದ್ವಿಚಕ್ರ ವಾಹನದಲ್ಲಿ ಆಗಮಿಸಿ ಹತ್ಯೆ ಮಾಡುವ ಸಂಚು ರೂಪಿಸಿದ್ದರು. ಆದರೆ ಅಂದು ಅಧಿಕ ಪೊಲೀಸರು ಸ್ಥಳದಲ್ಲಿ ಇದ್ದ ಹಿನ್ನೆಲೆಯಲ್ಲಿ ಕೃತ್ಯ ಎಸಗಲು ಸಾಧ್ಯವಾಗಲಿಲ್ಲ. ಹೀಗಾಗಿ ಕಾರ್ಯಕರ್ತ ವರುಣ್​ ಮೇಲೆ ಹಲ್ಲೆ ನಡೆಸಿದ್ದರು.

    ಆರ್​ಎಸ್​ಎಸ್​ ಕಾರ್ಯಕರ್ತ ವರುಣ್​ ಕಲಾಸಿಪಾಳ್ಯ ಪೊಲೀಸರಿಗೆ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸಿಸಿಟಿವಿ ವೀಕ್ಷಣೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts