ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ, ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿದ್ದು, ಈ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪರ ನಗ0ರದ ಟೌನ್ಹಾಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಆರ್ಎಸ್ಎಸ್ ಕಾರ್ಯಕರ್ತ ವರುಣ್ ಎಂಬುವವರ ಮೇಲೆ ಹಲ್ಲೆ ನಡೆಸಿದ ತಂಡವನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಈ ವಿಷಯ ಬಯಲಿಗೆ ಬಂದಿದೆ.
ಸಾದಿಕ್ ಅಲಿಯಾಸ್ ಸೌಂಡ್ ಸಾದಿಕ್, ಅಕ್ಬರ್, ಇರ್ಫಾನ್, ಸಿದ್ಧಿಕ್, ಸನಾ ಹಾಗೂ ಅಕ್ಬರ್ ಬಂಧಿತರು. ನೋಂದಣಿ ಸಂಖ್ಯೆಗೆ ಮಸಿ ಬಳಿದುಕೊಂಡು ದ್ವಿಚಕ್ರ ವಾಹನದಲ್ಲಿ ಆಗಮಿಸಿ ಹತ್ಯೆ ಮಾಡುವ ಸಂಚು ರೂಪಿಸಿದ್ದರು. ಆದರೆ ಅಂದು ಅಧಿಕ ಪೊಲೀಸರು ಸ್ಥಳದಲ್ಲಿ ಇದ್ದ ಹಿನ್ನೆಲೆಯಲ್ಲಿ ಕೃತ್ಯ ಎಸಗಲು ಸಾಧ್ಯವಾಗಲಿಲ್ಲ. ಹೀಗಾಗಿ ಕಾರ್ಯಕರ್ತ ವರುಣ್ ಮೇಲೆ ಹಲ್ಲೆ ನಡೆಸಿದ್ದರು.
ಆರ್ಎಸ್ಎಸ್ ಕಾರ್ಯಕರ್ತ ವರುಣ್ ಕಲಾಸಿಪಾಳ್ಯ ಪೊಲೀಸರಿಗೆ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸಿಸಿಟಿವಿ ವೀಕ್ಷಣೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್)