ಬೆಂಗಳೂರು: ಎಸ್ಡಿಪಿಐ, ಕೆಎಫ್ಡಿ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.
ತಮ್ಮ ಹತ್ಯೆಗೆ ಸಂಚು ರೂಪಿಸಿದ ವಿಷಯ ತಿಳಿಯುತ್ತಿದ್ದಂತೆ ಅವರು ಈ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದರಿಂದ ಅವುಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಈ ಮೂರು ಸಂಘಟನೆಗಳ ವಿರುದ್ಧ 1,500 ಕೇಸುಗಳು ಇವೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಹಲವು ಕೇಸ್ಗಳನ್ನು ಹಿಂದಕ್ಕೆ ಪಡೆದರು. ಹೀಗಾಗಿ ಈ ಸಂಘಟನೆಗಳು ಮತ್ತೆ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿವೆ ಎಂದು ಆರೋಪಿಸಿದರು.
ಈ ಸಂಘಟನೆಗಳಿಗೆ ನೆರೆ ರಾಷ್ಟ್ರಗಳಾದ ಬಾಂಗ್ಲಾ ಹಾಗೂ ಪಾಕಿಸ್ತಾನದಿಂದ ಹಣ ಹರಿದು ಬರುತ್ತಿದೆ. ಕೆಎಫ್ಡಿ ಸಂಘಟನೆ ಸದ್ಯ ಅಸ್ತಿತ್ವದಲ್ಲಿ ಇಲ್ಲ. ಆ ಸಂಘಟನೆ ಪಿಎಫ್ಐನೊಂದಿಗೆ ವಿಲೀನಗೊಂಡಿದೆ. (ದಿಗ್ವಿಜಯ ನ್ಯೂಸ್)