More

    ಬಿಜೆಪಿ ಸಂಸದ ಉಮೇಶ್​ ಜಾಧವ್​ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಉಮೇಶ್ ಜಾಧವ್ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಸಂಸದರಿಗೆ ಸೋಮವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇದನ್ನೂ ಓದಿರಿ ದಿನೇಶ್ ಗುಂಡೂರಾವ್​ಗೆ ಕರೊನಾ, ಸದನಕ್ಕೆ ಬಂದವರಲ್ಲಿ ಆತಂಕ

    ಈ ಬಗ್ಗೆ ಸಂಸದರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಪರೀಕ್ಷೆಗೆ ಒಳಗಾಗಿದ್ದು, ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್​ರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಭಯ ಪಡುವಂತಹದ್ದು ಏನೂ ಆಗಿಲ್ಲ. ಶೀಘ್ರದಲ್ಲೇ ಗುಣಮುಖನಾಗುತ್ತೇನೆ’ ಎಂದು ತಿಳಿಸಿದ್ದಾರೆ.

    ಸದ್ಯ ಕರೊನಾ ಸೋಂಕಿನಿಂದ ಬಳಲುತ್ತಿರುವ ಸಚಿವ ಮಾಧುಸ್ವಾಮಿ, ಕಾಂಗ್ರೆಸ್​ ಹಿರಿಯ ಶಾಸಕ ಎಚ್​.ಕೆ.ಪಾಟೀಲ್​ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಚಿವ ಮಾಧುಸ್ವಾಮಿಗೂ ಕಾಡುತ್ತಿದೆ ಸೋಂಕು!

    ಮೈಸೂರಲ್ಲಿ ನಕಲಿ ಡಾಕ್ಟರೇಟ್ ದಂಧೆ, ಶಾಸಕನ ಗೌರವ ಡಾಕ್ಟರೇಟ್ ತಡೆದ ಡಿಸಿಪಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts