ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಸುಧೀರ್ ಅತ್ತಾವರ್ ನಿರ್ದೇಶನದ ‘ಮೃತ್ಯೋರ್ಮ’ ಚಿತ್ರವು ಜೈಪುರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಇಂಡಿಯನ್ ಪನೋರಮ ಅತ್ಯುತ್ತಮ ಚಿತ್ರ’ ಪ್ರಶಸ್ತಿಗೆ ಆಯ್ಕೆಯಾಗಿದೆ. ಸುಧೀರ್ ಅತ್ತಾವರ್ ನಿರ್ದೇಶಿಸಿರುವ ಈ ಚಿತ್ರವನ್ನು ತ್ರಿವಿಕ್ರಮ ಬೆಳ್ತಂಗಡಿ ನಿರ್ಮಿಸಿದ್ದಾರೆ.
ಫೆ.9 ರಿಂದ 13ರವರೆಗೆ ಚಿತ್ರೋತ್ಸವ ನಡೆಯಲಿದ್ದು, ಸುಮಾರು 67 ದೇಶಗಳಿಂದ 329 ಚಿತ್ರಗಳು ಚಿತ್ರೋತ್ಸವದಲ್ಲಿ ಪಾಲ್ಗೊಂಡು 101 ಚಲನಚಿತ್ರಗಳು ಸ್ಪರ್ಧಾ ಕಣದಲ್ಲಿತ್ತು. ಇನ್ನು ‘ಮೃತ್ಯೋರ್ಮ’ ಚಿತ್ರವು ಈಗಾಗಲೇ ಅಮೇರಿಕ, ಯುರೋಪ್, ಕೆನ್ಯಾ ದೇಶಗಳ ಹಲವಾರು ಚಿತ್ರೋತ್ಸವಗಳಲ್ಲೂ ಭಾಗವಹಿಸುತ್ತಿದೆ.
ಜತೆಗೆ ಇತ್ತೀಚೆಗೆ ಮೂನ್ ವೈಟ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಸೇರಿ 4 ಪ್ರಶಸ್ತಿಗಳನ್ನು ಬಾಚಿಕೊಂಡು ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬಯಾಸ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಾಜ್ಯಪಾಲರ ಅಧಿಕೃತ ವೆಬ್ಸೈಟ್ನಲ್ಲೂ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ವಿಶೇಷ.