ಧೋನಿಗೆ ಭಾರತರತ್ನ ನೀಡಬೇಕೆಂದ ಕಾಂಗ್ರೆಸ್​ ಶಾಸಕ

blank

ನವದೆಹಲಿ: ಎರಡು ವಿಶ್ವಕಪ್​ ಪ್ರಶಸ್ತಿಗಳನ್ನು ಗೆದ್ದುಕೊಟ್ಟ ಟೀಮ್​ ಇಂಡಿಯಾದ ಮಾಜಿ ನಾಯಕ ಎಂಎಸ್​ ಧೋನಿ ಶನಿವಾರ ನಿವೃತ್ತಿ ಪ್ರಕಟಿಸಿದ ಬಳಿಕ ಅವರಿಗೆ ಕ್ರಿಕೆಟ್​ ವಲಯ ಮತ್ತು ಕ್ರಿಕೆಟೇತರ ಕ್ಷೇತ್ರದಿಂದ ಅಪಾರ ಗೌರವ ಸಲ್ಲಿಕೆಯಾಗುತ್ತಿದೆ. ಎಲ್ಲರೂ ಈಗ ಧೋನಿ ಗುಣಗಾನ ಮಾಡುತ್ತಿದ್ದಾರೆ. ಈ ನಡುವೆ ಮಧ್ಯಪ್ರದೇಶದ ಕಾಂಗ್ರೆಸ್​ ಶಾಸಕರೊಬ್ಬರು ಒಂದು ಹೆಜ್ಜೆ ಮುಂದೆ ಹೋಗಿ, ಧೋನಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಧ್ಯಪ್ರದೇಶದ ಭೋಪಾಲ್​ ಶಾಸಕ ಪಿಸಿ ಶರ್ಮ ಎಂಬವರು, ಧೋನಿ ದೇಶದ ರತ್ನ ಎಂದು ಟ್ವೀಟ್​ ಮಾಡಿದ್ದಾರೆ. ಜತೆಗೆ ಧೋನಿ ಭಾರತೀಯ ಕ್ರಿಕೆಟ್​ ಅನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಹೀಗಾಗಿ ಅವರಿಗೆ ಭಾರತರತ್ನ ನೀಡಿ ಗೌರವಿಸಬೇಕೆಂದು ಹೇಳಿದ್ದಾರೆ.

ಇದನ್ನೂ ಓದಿ: ಧೋನಿ ವಿದಾಯದ ಬೆನ್ನಲ್ಲೇ ಯುವರಾಜ್​ ನಿವೃತ್ತಿಯಿಂದ ವಾಪಸ್​ ಆಗ್ತಾರಾ?

ಭಾರತ ಪರ 90 ಟೆಸ್ಟ್​, 350 ಏಕದಿನ ಮತ್ತು 98 ಟಿ20 ಪಂದ್ಯಗಳನ್ನು ಆಡಿರುವ 39 ವರ್ಷದ ಧೋನಿ, 2019ರ ಏಕದಿನ ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ನ್ಯೂಜಿಲೆಂಡ್​ ವಿರುದ್ಧ ಕೊನೆಯದಾಗಿ ಆಡಿದ್ದರು. ಐಸಿಸಿಯ ಎಲ್ಲ ಪ್ರಶಸ್ತಿಗಳನ್ನು ಗೆದ್ದುಕೊಂಡ ಏಕೈಕ ನಾಯಕ ಎಂಬ ಹೆಗ್ಗಳಿಕೆ ಅವರದಾಗಿದೆ.

ಚೀನಾ ಲಿಂಕ್​ ಇದ್ದರೂ, ಡ್ರೀಮ್​11 ಜತೆ ಪ್ರಾಯೋಜಕತ್ವ ಒಪ್ಪಂದ ಸಮರ್ಥಿಸಿಕೊಂಡ ಬಿಸಿಸಿಐ

Share This Article

ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking

Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…

ಚಾಣಕ್ಯನ ಪ್ರಕಾರ ನಿಮಗೆ ಈ 4 ಸಂಗತಿ ಗೊತ್ತಿದ್ದರೆ ಯಾರಿಂದಲೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ! Chanakya Niti

Chanakya Niti : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…

ಪ್ರತಿದಿನ ಬೆಳಿಗ್ಗೆ ಪಪ್ಪಾಯಿ ತಿಂದರೆ ಏನಾಗುತ್ತದೆ ಗೊತ್ತಾ? ನೀವು ಇದನ್ನು ತಿಳಿದುಕೊಳ್ಳಲೇಬೇಕು..Papaya

Papaya: ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯಕ್ಕೂ ಪ್ರಯೋಜನಕಾರಿ ಎನ್ನುವುದು ನಮಗೆ ಗೊತ್ತಿರುವ ವಿಚಾರವಾಗಿದೆ. ಪಪ್ಪಾಯಿ…