More

    ಅಭಿವೃದ್ಧಿಗೆ ನಾಗರಿಕರ ಸಹಕಾರ ಅಗತ್ಯ

    ಮುದ್ದೇಬಿಹಾಳ: ಪಟ್ಟಣದಲ್ಲಿ ಪುರಸಭೆಯಿಂದ ಕೈಗೊಳ್ಳುವ ಅಭಿವೃದ್ಧಿ ಕೆಲಸಗಳಿಗೆ ನಾಗರಿಕರು ಸಹಕಾರ ನೀಡಬೇಕೆಂದು ಪುರಸಭೆ ನೂತನ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ ಹೇಳಿದರು.

    ಪಟ್ಟಣದ ಕುಂಬಾರ ಓಣಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಎಸ್‌ಎಫ್​ಸಿ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕರೊನಾ ಸಂಕಷ್ಟದ ಕಾಲದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದ್ದವು. ಇದೀಗ ನಿಧಾನವಾಗಿ ಲಭ್ಯವಿರುವ ಅನುದಾನದಲ್ಲಿ ಪಟ್ಟಣದ ಅಭಿವೃದ್ಧಿಗೆ ಮುಂದಾಗುವುದಾಗಿ ಹೇಳಿದರು.

    ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ ಮಾತನಾಡಿ, ಪುರಸಭೆಗೆ ಈಗ ಜೀವ ಕಳೆ ಬಂದಿದ್ದು, ಆಡಳಿತ ಮಂಡಳಿಯ ಸಹಯೋಗದಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಸಿಸಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು, ನಾಗರಿಕರು ತಮ್ಮ ಮನೆ ಮುಂದಿರುವ ಅತಿಕ್ರಮಿತ ಕಟ್ಟಡಗಳು, ಕಂಪೌಂಡ್‌ಗಳು, ಕಟ್ಟೆಗಳನ್ನು ಸ್ವಯಂಪ್ರೇರಿತರಾಗಿ ತೆರವುಗೊಳಿಸಿಕೊಂಡು ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

    ಉಪಾಧ್ಯಕ್ಷೆ ಶಹಜಾದಬಿ ಹುಣಸಗಿ, ಪುರಸಭೆ ಸದಸ್ಯ ರಿಯಾಜ್ ಢವಳಗಿ, ಎಇ ಆರ್.ಎಂ. ಜುಮನಾಳ, ಗುತ್ತಿಗೆದಾರ ಸುರೇಶಗೌಡ ಪಾಟೀಲ, ಪುರಸಭೆ ಅಧಿಕಾರಿ ರಮೇಶ ಮಾಡಬಾಳ, ಮುಖಂಡ ಅಶೋಕ ನಾಡಗೌಡ, ಶರಣು ದೇಗಿನಾಳ, ಅಜೀಜ್ ಮೋಮಿನ, ರುದ್ರಗೌಡ ಅಂಗಡಗೇರಿ, ಸಚಿನ್ ಪಾಟೀಲ, ಅನಿಲ್ ನಾಯಕ, ಲಕ್ಷ್ಮಣ ಲಮಾಣಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts