More

    ಕಾಂಗ್ರೆಸ್‌ನ್ನು ಅಧಿಕಾರದಿಂದ ದೂರ ಇಟ್ಟಿದ್ದೇವೆ

    ಮುದ್ದೇಬಿಹಾಳ: ಪಟ್ಟಣದ ಪುರಸಭೆಯಲ್ಲಿ ಕಾಂಗ್ರೆಸ್- ಬಿಜೆಪಿಗೆ ಬಹುಮತ ಇಲ್ಲ. ಆದರೆ, ಕಾಂಗ್ರೆಸ್‌ಗೆ ಅಧಿಕಾರ ಗದ್ದುಗೆ ಏರುವ ಅವಕಾಶವಿದ್ದರೂ ಅಧಿಕೃತವಾಗಿ ಆ ಪಕ್ಷದ ಸದಸ್ಯರ‌್ಯಾರು ನಾಮಪತ ಸಲ್ಲಿಸಲಿಲ್ಲ. ನಮ್ಮ ವಿರೋಧಿ ಕಾಂಗ್ರೆಸ್ ಹೊರತು ಜೆಡಿಎಸ್ ಅಲ್ಲ. ಆ ಹಿನ್ನೆಲೆಯಲ್ಲಿ ನಾವು ಮೌನವಾಗಿದ್ದು, ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿ ಕೂಡುತ್ತೇವೆ ಎಂದು ಆಹಾರ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

    ಪಟ್ಟಣದ ತಮ್ಮ ನಿವಾಸದಲ್ಲಿ ಬುಧವಾರ ಬಿಜೆಪಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷೇತರರು, ಜೆಡಿಎಸ್ ಸದಸ್ಯರು ಸದ್ಯಕ್ಕೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ ನಮ್ಮ ಪಕ್ಷದ ಸದಸ್ಯರು ಅಭಿವೃದ್ಧಿ ವಿಷಯದಲ್ಲಿ ಸಹಕಾರ ನೀಡುತ್ತೇವೆ. ಆರು ತಿಂಗಳು ಕಾಯುತ್ತೇವೆ. ಅಭಿವೃದ್ಧಿಪರ ಆಡಳಿತ ಕೊಟ್ಟರೆ ಸಹಕಾರ ಮುಂದುವರಿಯಲಿದೆ. ಇಲ್ಲದಿದ್ದರೆ ನಮ್ಮ ಬಲ ಏನೆಂಬುದನ್ನು ತೋರಿಸುತ್ತೇವೆ ಎಂದು ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಪುರಸಭೆ ಸದಸ್ಯರಾದ ಬಸವರಾಜ ಮುರಾಳ, ಚನ್ನಪ್ಪ ಕಂಠಿ, ಸದಾಶಿವ ಮಾಗಿ, ಸಹನಾ ಬಡಿಗೇರ, ಅಶೋಕ ವನಹಳ್ಳಿ, ಬಸಪ್ಪ ತಟ್ಟಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts