More

    ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬನಿಷೇಧ

    ಬಳ್ಳಾರಿ : ಜಿಲ್ಲಾದ್ಯಂತ ಜು.20 ರಿಂದ 29 ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

    ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲೂಕುಗಳ ಕೆಲ ಗ್ರಾಮಗಳಲ್ಲಿ ವೈಷಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದ್ದು, ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 (ಎ) (ಬಿ) (ಡಿ) (ಇ) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮೊಹರಂ ಹಬ್ಬವನ್ನು ಜಿಲ್ಲೆಯ ವಿವಿಧ ತಾಲೂಕುಗಳ ಕೆಲ ಗ್ರಾಮಗಳಲ್ಲಿ ನಿಷೇಧಿಸಲಾಗಿದೆ.

    ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್ ಪಕ್ಕದಲ್ಲಿನ ಮಹಾನಂದಿಕೊಟ್ಟಂ ಒಳಗಡೆ ಹಾಗೂ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆ. ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್ ಗ್ರಾಮ, ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು ಗ್ರಾಮ, ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಲ್ಲು, ಮಿಂಚೇರಿ, ಸಂಜೀವರಾಯನ ಕೋಟೆ ಗ್ರಾಮ, ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಂ.15-ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

    ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಎ)ರ ಅಡಿಯಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಗದೆ, ಬಂದೂಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತುವನ್ನು ಒಯ್ಯುವುದು. ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ತಯಾರಿ ಪ್ರದರ್ಶನ ಅಥವಾ ಪ್ರಸಾರವನ್ನು ಪ್ರತಿಬಂದಿಸುವುದು ಹಾಗೂ ಗುಂಪುಗೂಡಿ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts