ಚಿತ್ರದುರ್ಗ: ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳಿಂದ ಕರೊನಾ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲವೆಂದು ವಿಧಾನಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಕರೊನಾ ಹೆಸರಲ್ಲಿ ಬೊಕ್ಕಸವನ್ನು ಲೂಟಿ ಮಾಡಲಾಗುತ್ತಿದೆ.
ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸನ್ನಿವೇಶದಲ್ಲಿ ಶಾಲೆಗಳನ್ನು ಆರಂಭಿಸುವುದು ತೀರಾ ಅಪಾಯಕಾರಿ. ಜೀವ ಉಳಿಸಿಕೊಳ್ಳಲು ಜನಸಾಮಾನ್ಯರು ಪರದಾಡುತ್ತಿರುವಾಗ ಒಂದು ವರ್ಷ ಮಕ್ಕಳಿಗೆ ಶಿಕ್ಷಣ ಇಲ್ಲದಿದ್ದರೆ ಪ್ರಪಂಚ ಮುಳುಗದು. ಮಕ್ಕಳ ನ್ನು ಶಾಲೆಗಳಿಗೆ ಕಳಿಸಲು ಪೋಷಕರು ಹಿಂಜರಿಯುತ್ತಿದ್ದಾರೆಂಬುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಲಿ ಎಂದರು.
ಇದನ್ನೂ ಓದಿ: ಹಾಥರಸ್ ಕೇಸ್: ನಿಗೂಢವಾಗಿ ಸಾವನ್ನಪ್ಪಿದ್ರು ಎಸ್ಐಟಿಯಲ್ಲಿರುವ ಪೊಲೀಸ್ ಅಧಿಕಾರಿಯ ಪತ್ನಿ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಮುಖಂಡರಾದ ಮುದ ಸಿರ್ನವಾಜ್, ಅಬ್ದುಲ್ಲಾ, ಗಂಗಾಧರ್, ವಸೀಂ ಮತ್ತಿತರರು ಇದ್ದರು.
ಈ ಬಜಾರ್ಗಳಲ್ಲಿ ಈರುಳ್ಳಿ ಬೆಲೆ ಕಿಲೋಗೆ 35 ರೂಪಾಯಿ!