ಮುಂಬೈ: ವಾಣಿಜ್ಯ ನಗರಿ ಮುಂಬೈ ಅನ್ನು ಸ್ಫೋಟಿಸುವುದಾಗಿ ಪೊಲೀಸರಿಗೆ ಬೆದರಿಕೆಗೆ ಸಂದೇಶವೊಂದು ಬಂದಿದೆ. ಇದುವರೆಗೂ ಫೋನ್ ಕಾಲ್ ಮತ್ತು ಈಮೇಲ್ ಮೂಲಕ ಬರುತ್ತಿದ್ದ ಬೆದರಿಕೆ ಕರೆಗಳು ಈ ಬಾರಿ ಟ್ವಿಟರ್ ಮೂಲಕ ಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮುಂಬೈ ಟ್ವಿಟರ್ ಖಾತೆಗೆ ಬೆದರಿಕೆ ಸಂದೇಶ ಬಂಧಿದೆ. ಶೀಘ್ರದಲ್ಲೇ ಇಡೀ ನಗರವನ್ನು ಸ್ಫೋಟಿಸುತ್ತೇನೆ ಎಂದು ಇಂಗ್ಲಿಷ್ ಭಾಷೆಯಲ್ಲಿ ಕಿಡಿಗೇಡಿಯೊಬ್ಬ ಬೆದರಿಕೆ ಸಂದೇಶ ರವಾನಿಸಿದ್ದಾನೆ.
ಈ ಸಂದೇಶವನ್ನು ಮುಂಬೈ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಮೆಸೇಜ್ ಬಂದ ಖಾತೆಯನ್ನು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರಿನಲ್ಲೂ ಇದೇ ರೀತಿ ಬೆದರಿಕೆ
ಈ ಹಿಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇದೇ ರೀತಿಯ ಬೆದರಿಕೆ ಕರೆ ಬಂದಿತ್ತು. ವೈಭವ್ ಗಣೇಶ್ ಎಂಬಾತ ಫ್ಯೂಚರ್ ಎಫ್ಟಿಸುಫ್ಜಾನ್ (@futureftsufjan) ಹೆಸರಿನ ಟ್ವಿಟರ್ ಖಾತೆಯಲ್ಲಿ ಕಳೆದ ವರ್ಷ ಡಿಸೆಂಬರ್ 10ರಂದು ರಾತ್ರಿ 10.15ಕ್ಕೆ ಟ್ವೀಟ್ ಮಾಡಿ, ನಾನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಡುತ್ತೇನೆ. ಹೀಗಾಗಿ ಅವರು ನಗರಕ್ಕೆ ಹತ್ತಿರದಲ್ಲಿ ಮತ್ತೊಂದು ನಿಲ್ದಾಣವನ್ನು ಮರು ನಿರ್ಮಿಸಬೇಕಾಗುತ್ತದೆ ಎಂದಿದ್ದ. ಬಳಿಕ ಆತನನ್ನು ಬಂಧಿಸಲಾಗಿತ್ತು.
ವೈಭವ್ ಗಣೇಶ್. ಆತ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಬೆಂಗಳೂರು ಟ್ರಾಫಿಕ್ ಜಾಮ್ನಿಂದ ಬೇಸತ್ತು ಈ ರೀತಿ ಮಾಡಿದೆ ಅಂತ ಆರೋಪಿ ಬಾಯಿಬಿಟ್ಟ. ಪರಪ್ಪನ ಅಗ್ರಹಾರದ ಕೂಡ್ಲು ಗೇಟ್ನಿಂದ ಏರ್ಪೊರ್ಟ್ಗೆ ಆತ ಪ್ರಯಾಣ ಮಾಡಿದ್ದ. ಈ ವೇಳೆ ಟ್ರಾಫಿಕ್ ಜಾಮ್ ಜಾಸ್ತಿಯಾಗಿತ್ತು. ಇದರಿಂದ ಬೇಸತ್ತು ಕುಲ್ಲಕ್ಷ ಕಾರಣಕ್ಕಾಗಿ ವೈಭವ್ ಗಣೇಶ್ ಈ ರೀತಿ ಮಾಡಿದ್ದಾನೆ. ಮೂಲತ ಪಂಜಾಬ್ ರಾಜ್ಯದವನಾಗಿದ್ದು, ಪಾಲಕರ ಜತೆ ಬೆಂಗಳೂರಿನ ಕೊಡ್ಲು ಗೇಟ್ ಬಳಿ ಆರೋಪಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದರು. (ಏಜೆನ್ಸೀಸ್)
ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಟ್ವೀಟ್ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಯುವಕ ಅರೆಸ್ಟ್!