More

    ಕರ್ನಾಟಕ ರಾಜ್ಯೋತ್ಸವ ಬುಧವಾರ

    ಮುಂಡರಗಿ: ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಪ್ರೌಢಶಾಲೆ ಮೈದಾನದಲ್ಲಿ ತಾಲೂಕು ಆಡಳಿತದಿಂದ ನ. 1ರಂದು ಬೆಳಗ್ಗೆ 9 ಗಂಟೆಗೆ 68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50 ಕಾರ್ಯಕ್ರಮ ಏರ್ಪಾಟಾಗಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಡಾ. ಎಚ್.ಕೆ. ಪಾಟೀಲ ಉಪಸ್ಥಿತರಿರುವರು. ಶಾಸಕ ಡಾ. ಚಂದ್ರು ಲಮಾಣಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಸಲೀಂ ಅಹ್ಮದ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ಜಿ.ಎಸ್. ಪಾಟೀಲ, ಡಾ. ವೆಂಕಟೇಶ ನಾಯ್ಕ ಪಾಲ್ಗೊಳ್ಳುವರು. ಗದಗ ಸರ್ಕಾರಿ ಮಹಿಳಾ ಪದವಿ ಮಹಾವಿದ್ಯಾಲಯದ ಉಪನ್ಯಾಸಕಿ ಸುಜಾತಾ ಬರದೂರ ಉಪನ್ಯಾಸ ನೀಡುವರು. ತಹಸೀಲ್ದಾರ್ ಧನಂಜಯ ಎಂ. ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts