More

    ಮುಂಡಿಗೆಕೆರೆ ಪಕ್ಷಿಧಾಮ ಸಂರಕ್ಷಿತ ಪ್ರದೇಶ

    ಶಿರಸಿ: ತಾಲೂಕಿನ ಸೋಂದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡಿಗೆ ಕೆರೆ ಪಕ್ಷಿಧಾಮವನ್ನು ವನ್ಯಜೀವಿ ಕಾಯ್ದೆಯಡಿಯಲ್ಲಿ ವನ್ಯಜೀವಿ ಸಂರಕ್ಷಿತ ಪ್ರದೇಶ ಎಂದು ಘೊಷಿಸಲು ಮಂಗಳವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮಂಡಳಿ ಅಧ್ಯಕ್ಷ ಅನಂತ ಅಶೀಸರ, ಸಭೆಯಲ್ಲಿ ಅರಣ್ಯ ಮತ್ತು ಪರಿಸರ ಸಚಿವರು, ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು, ವನ್ಯಜೀವಿ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ನಿರ್ಣಯದಿಂದ ಪಕ್ಷಿಧಾಮ ಸಂರಕ್ಷಿಸುವಲ್ಲಿ ಮತ್ತಷ್ಟು ಬಲ ಬಂದಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಜೀವವೈವಿಧ್ಯ ಮಂಡಳಿ ಶಿಫಾರಸು ಮಾಡಿತ್ತು. ಮುಂಡಿಗೆ ಕೆರೆ ಪಕ್ಷಿಧಾಮ ರಕ್ಷಣೆ ಸಲುವಾಗಿ ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಅಧ್ಯಕ್ಷತೆಯ ಜಾಗ್ರತ ಸಮಿತಿ ಕೆಲಸ ಮಾಡುತ್ತಿದೆ ಎಂಬುದನ್ನು ನೆನಪಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts