More

    ಮುಂಡ್ಕೂರು ರಾಮದಾಸ್ ಕಾಮತ್ ಆತ್ಮಹತ್ಯೆ ಪ್ರಕರಣ ಎಸಿಪಿ ನೇತೃತ್ವದಲ್ಲಿ ಮುಂದುವರಿದ ತನಿಖೆ

    ಮಂಗಳೂರು: ಉದ್ಯಮಿ ಮುಂಡ್ಕೂರು ರಾಮದಾಸ್ ಕಾಮತ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ಕೇಂದ್ರ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಮುಂದುವರಿದಿದೆ. ಅವರ ಉದ್ಯಮ ವಲಯ, ಕುಟುಂಬ ವರ್ಗ ಮೊದಲಾದ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


    ಸೆ.17ರಂದು ರಥಬೀದಿಯ ಫ್ಲಾೃಟ್‌ನಲ್ಲಿ ರಾಮದಾಸ್ ಕಾಮತ್ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಘಟನೆಯ ಮೂರು ದಿನಗಳ ಅನಂತರ ಆತ್ಮಹತ್ಯೆಯ ಕಾರಣದ ಕುರಿತಾಗಿ ಅನುಮಾನ ವ್ಯಕ್ತಪಡಿಸಿ ಮಾಹಿತಿಗಳು ಬಂದವು. ಈ ಹಿನ್ನೆಲೆಯಲ್ಲಿ ಕೂಡಲೇ ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.


    ತನಿಖೆಗೆ ಪತ್ರ
    ಕಾಮತ್ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಅನುಮಾನಗಳಿವೆ. ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ. ನಾನು ಅವರ ಬಗ್ಗೆ ತಿಳಿದಿದ್ದೇನೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನಂಬಲು ಸಾಧ್ಯವಿಲ್ಲ ಎಂದು ಉದ್ಯಮಿ ಬಿ.ಆರ್.ಶೆಟ್ಟಿ ಅವರು ವಕೀಲರ ಮೂಲಕ ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತರು, ‘ಪತ್ರ ನಮಗೆ ತಲುಪಿದೆ. ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.


    ದೂರು ನೀಡಿಲ್ಲ
    ಕಾಮತ್ ಅವರ ಸಾವಿನ ಬಗ್ಗೆ ಅವರ ಕುಟುಂಬಸ್ಥರು ಯಾವುದೇ ಸಂದೇಹ ವ್ಯಕ್ತಪಡಿಸಿ ದೂರು ನೀಡಿಲ್ಲ. ಆದಾಗ್ಯೂ ಯಾವುದೇ ಅನುಮಾನಗಳಿಗೆ ಆಸ್ಪದವಾಗಬಾರದೆಂಬ ಉದ್ದೇಶದಿಂದ ಎಸಿಪಿ ನೇತೃತ್ವದಲ್ಲಿಯೇ ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
    ಒಬ್ಬಂಟಿಯಾಗಿದ್ದಾಗ ಕೃತ್ಯ
    ರಾಮದಾಸ್ ಕಾಮತ್ ಅವರು ಪತ್ನಿಯನ್ನು ಮುಂಡ್ಕೂರಿಗೆ ಬಿಟ್ಟು ಬಂದಿದ್ದರು. ಮರುದಿನ ತಾನು ಕೂಡ ಮುಂಡ್ಕೂರಿಗೆ ಬರುವುದಾಗಿ ಹೇಳಿದ್ದರು. ಆದರೆ ಹೋಗಿರಲಿಲ್ಲ. ಪತ್ನಿ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಆಗ ಪತ್ನಿ ಮಂಗಳೂರಿನಲ್ಲಿರುವ ತನ್ನ ತಂಗಿಯ ಮಕ್ಕಳಿಗೆ ತಿಳಿಸಿದ್ದರು. ಅವರು ಬಂದು ನೋಡಿದಾಗ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts