More

    ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತಕ್ಕೆ ದಿನ ನಿಗದಿ; ಆರ್.ಅಶೋಕ್, ಸಿ.ಟಿ ರವಿ ಪ್ರೆಸೆಂಟ್ಸ್ | ಅಶ್ವಥ್ ನಾರಾಯಣ ಚಿತ್ರಕತೆ

    ಬೆಂಗಳೂರು: ರಾಜ್ಯದಲ್ಲಿ ಸದ್ಯ ಹೆಚ್ಚು ಚರ್ಚೆಯಲ್ಲಿರುವ ಹೆಸರು ಉರಿಗೌಡ ಹಾಗೂ ನಂಜೇಗೌಡ. ಇದೀಗ ವಿವಾದಿತ ಪಾತ್ರಗಳನ್ನು ಆಧರಿಸಿರುವ ಸಿನಿಮಾ ನಿರ್ಮಾಣ ಮಾಡಲು ಸಚಿವ ಮುನಿರತ್ನ ಮುಂದಾಗಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, ಸಿನಿಮಾದ ಮುಹೂರ್ತ ದಿನಾಂಕ ಘೋಷಿಸಿದ್ದಾರೆ.

    ಉರಿಗೌಡ – ನಂಜೇಗೌಡ ಟೈಟಲ್ ರಿಜಿಸ್ಟರ್ ಆಗುತ್ತಿದ್ದಂತೆ ಮೇ 18 ರಂದು ಬೆಳಗ್ಗೆ 10 ಗಂಟೆಗೆ ಕಂಠೀರವ ಸ್ಟುಡಿಯೋನಲ್ಲಿ ಸಿನಿಮಾ ಮುಹೂರ್ತ ನಡೆಯಲಿದೆ ಎಂದು ಮುನಿರತ್ನ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾಕ್ಕೆ ಚಿತ್ರಕತೆಯನ್ನು ಸಚಿವ ಅಶ್ವಥ್ ನಾರಾಯಣ ಒದಗಿಸಿದ್ದು, ಸಿನಿಮಾವನ್ನು ಸಚಿವ ಆರ್.ಅಶೋಕ್ ಹಾಗೂ ಸಿಟಿ ರವಿ ಪ್ರೆಸೆಂಟ್ಸ್ ಮಾಡಲು ಮುಂದಾಗಿದ್ದಾರೆ.

    ಇದನ್ನೂ ಓದಿ: ಮದುವೆಗೆ ಹೋಗುವುದನ್ನೇ ಮರೆತ ವರ; ಮುರಿದು ಬಿದ್ದ ವಿವಾಹದ ವೆಚ್ಚ ಭರಿಸುವಂತೆ ತಾಕೀತು ಮಾಡಿದ ವಧು!

    https://twitter.com/MunirathnaMLA/status/1637111111840567297

    ಉರಿಗೌಡ – ನಂಜೇಗೌಡ ಸಿನಿಮಾವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡಲಿದ್ದಾರೆ. ಮುನಿರತ್ನ ಅವರ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಮುನಿರತ್ನ ಅವರು ಟೈಟಲ್​ಗೆ ಅರ್ಜಿ ಸಲ್ಲಿಸಿದ್ದರ ವಿರುದ್ಧ ಈಗಾಗಲೇ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಉರಿಗೌಡ ಹಾಗೂ ನಂಜೇಗೌಡ ಎಂಬ ಪಾತ್ರಗಳೆ ಇಲ್ಲ. ಇದು ಬಿಜೆಪಿಯವರು ರಾಜಕೀಯಕ್ಕಾಗಿ ಸೃಷ್ಟಿ ಮಾಡಿರುವ ಪಾತ್ರಗಳು ಎಂಬ ಆರೋಪಗಳು ವಿಪಕ್ಷ ನಾಯಕರು ಮಾಡುತ್ತಿದ್ದಾರೆ.

    ಸಾಕಷ್ಟು ಆರೋಪ – ಪ್ರತ್ಯಾರೋಪಗಳಿಗೆ ಕಾರಣವಾಗಿರುವ ಉರಿಗೌಡ – ನಂಜೇಗೌಡ ಹೆಸರನ್ನು ಇಟ್ಟುಕೊಂಡು ಚುನಾವಣೆಯ ಸಂದರ್ಭದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ, ಮುಂದಿನ ದಿನಗಳಲ್ಲಿ ಯಾವ ಸ್ವರೂಪದ ರಾಜಕೀಯ ಆರೋಪಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

    ಇದನ್ನೂ ಓದಿ: ಹಾಸನ | ಕರ್ಕಶ ಧ್ವನಿ ಮಾಡುತ್ತಾ ಬೈಕ್ ಚಾಲನೆ ಮಾಡಿದ್ದಕ್ಕೆ ಆರಂಭವಾದ ಜಗಳ ಓರ್ವನ ಹತ್ಯೆಯಲ್ಲಿ ಅಂತ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts