More

    ಸೀರಿಯಲ್ ನಟಿಗಾಗಿ ಉರುಳಿತ್ತು ರುಂಡ; ನಾಲ್ವರು ಕೊಲೆ ಆರೋಪಿಗಳ ಬಂಧನ

    ಹುಬ್ಬಳ್ಳಿ: ಸೀರಿಯಲ್ ನಟಿಗಾಗಿ ಕೊಲೆ ಮಾಡಿ ರುಂಡ-ಮುಂಡ ಬೇರ್ಪಡಿಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆ ಮೂಲಕ ಕೊಲೆ ಪ್ರಕರಣವೊಂದರ ರಹಸ್ಯ ಭೇದಿಸಲ್ಪಟ್ಟಿದ್ದು, ಕೊಲೆ ಹಿಂದಿನ ಪ್ರೇಮಕಥೆ ಬೆಳಕಿಗೆ ಬಂದಿದೆ.

    ಹುಬ್ಬಳ್ಳಿಯ ದೇವರಗುಂಡಿಹಾಳದಲ್ಲಿ ಇತ್ತೀಚೆಗೆ ರುಂಡವೊಂದು ಸಿಕ್ಕಿತ್ತು. ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಗಿಳಿದ ಹುಬ್ಬಳ್ಳಿ ಕೇಶ್ವಾಪೂರ ಠಾಣೆ ಪೊಲೀಸರು ಕೊನೆಗೂ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ನಿಯಾಜ್ ಅಹ್ಮದ್ ಕಟಿಗಾರ, ತೌಸಿಫ್ ಚಿನ್ನಾಪೂರ, ಅಲ್ತಾಫ ಮುಲ್ಲಾ ಹಾಗೂ ಅಮನ ಗಿರಣಿವಾಲೆ ಬಂಧಿತರು.

    ತನಿಖೆ ನಡೆಸಿದ ಪೊಲೀಸರಿಗೆ ಸೀರಿಯಲ್ ನಟಿ ಶನಾಯ್​ ಕಾಟ್ವೆ ಎಂಬಾಕೆಗಾಗಿ ಈ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಕೊಲೆ ಆರೋಪಿ ನಿಯಾಜ್​ ಹಾಗೂ ಶನಾಯ್​ಗೂ ಪ್ರೇಮವಿತ್ತು. ಆದರೆ ಅದಕ್ಕೆ ಯುವತಿಯ ಸೋದರ ರಾಕೇಶ್ ಅಡ್ಡಿಯಾಗಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಗಳು ಆತನನ್ನು ಕೊಲೆಗೈದು, ರುಂಡ ಬೇರ್ಪಡಿಸಿ ದೇವರಗುಂಡಿಹಾಳದಲ್ಲಿ ಎಸೆದಿದ್ದರು. ಬಳಿಕ ದೇಹದ ಉಳಿದ ಭಾಗಗಳನ್ನು ಸುಟ್ಟುಹಾಕಿ ಸಾಕ್ಷ್ಯನಾಶಕ್ಕೆ ಯತ್ನಿಸಿದ್ದರು. ಅದಾಗ್ಯೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ಧಾರವಾಡ ಎಸ್​ಪಿ ಕೃಷ್ಣಕಾಂತ್ ಮಾಹಿತಿ ನೀಡಿದ್ದಾರೆ.

    ಉಗುರು ಉದ್ದ ಇದೆ, ಓಲೆ ದೊಡ್ಡದಿದೆ, ಜತೆಗೆ ಮೊಬೈಲ್​ಫೋನ್​ ಇದೆ ಎಂದು ಬೈದ ಪ್ರಾಂಶುಪಾಲ; ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

    ಕೋವಿಡ್​ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಎಂಬ ಚಿಂತೆಯೇ?; ಇಲ್ಲಿದೆ ನೋಡಿ ರಿಯಲ್ ಟೈಮ್ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts