ಚನ್ನಪಟ್ಟಣ
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತಮಿಳುನಾಡು ಮೂಲದ ಮುರುಗೇಶ್ (40) ಕೊಲೆ ಆರೋಪಿ. ಈತ ತಮಿಳುನಾಡಿನ ಇನ್ನಿಬ್ಬರು ಸ್ನೇಹಿತರ ಸಹಕಾರದಿಂದ ಕೊಲೆ ಮಾಡಿರುವುದು ದೃಢಪಟ್ಟಿದೆ.
ಕೊಲೆ ಆರೋಪಿಯಾದ ಮುರುಗೇಶ್, ಈ ಹಿಂದೆ ಯೋಗೇಶ್ವರ್ ಸಹೋದರ ಗಂಗಾಧರ್ ಎಂಬುವವರ ತೋಟದ ಕಾವಲುಗಾರನಾಗಿದ್ದ. ಮಹದೇವಯ್ಯನವರ ತೋಟದ ಪಕ್ಕದಲ್ಲಿದ್ದ ಈ ತೋಟದಲ್ಲಿ ಪತ್ನಿಯ ಸಮೇತ ನೆಲೆಸಿದ್ದ. ಆದರೆ, ಈತನನ್ನು ಕೆಲಸದಿಂದ ಇತ್ತೀಚಿಗೆ ತೆಗೆದುಹಾಕಲಾಗಿತ್ತು.
ಹಣಕ್ಕಾಗಿ ಕೃತ್ಯ?!
ಈ ಹಿಂದೆ ಇಲ್ಲಿ ಕೆಲಸ ಮಾಡುವಾಗ ಮುರುಗೇಶ್ ಮಹದೇವಯ್ಯನವರ ವಿಶ್ವಾಸ ಗಳಿಸಿದ್ದ. ಜಮೀನು ಮಾರಿರುವ ಹಿನ್ನೆಲೆಯಲ್ಲಿ ಮಹದೇವಯ್ಯ ನವರ ಬಳಿ ಅಪಾರವಾದ ಹಣವಿದೆ ಎಂಬ ಮಾಹಿತಿಯಿಂದ, ತಮಿಳುನಾಡಿನ ತನ್ನಿಬ್ಬರು ಸ್ನೇಹಿತರ ಸಹಕಾರದಿಂದ ಈ ಕೃತ್ಯ ಎಸಗಿದ್ದಾನೆ.