ಲಖನೌ: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ಭಾನುವಾರ ಪೊಲೀಸರಿಗೆ ಶರಣಾಗಿದ್ದಾರೆ.
ಲಖೀಂಪುರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಆಶಿಷ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಕಳೆದ ವಾರ ಸುಪ್ರೀಂ ಕೋರ್ಟ್ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ಹಾಜರಾಗಿದ್ದರು.
ಸದ್ಯ ಲಖೀಂಪುರ ಜೈಲಿಗೆ ಅವರನ್ನು ಕಳುಹಿಸಿಕೊಡಲಾಗಿದೆ. ನಾಳೆ ಸೋಮವಾರವೇ ಶರಣಾಗತಿಗೆ ಕೊನೇ ದಿನವಾಗಿತ್ತು. ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಜೀಪು ಹರಿಸಿದ್ದರು. ತೀವ್ರ ಗಾಯಗೊಂಡ ನಾಲ್ವರು ರೈತರು ಮೃತಪಟ್ಟಿದ್ದರು.
ತನಗೆ ಸಿಕ್ಕ 5 ಲಕ್ಷ ರೂ. ಬ್ಯಾಗನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಹತ್ತರ ಪೋರ!
ಬಾಳೆಹಣ್ಣು ತಿಂದು ಕ್ರಿಕೆಟ್ ದಂತಕಥೆಗೆ ವಿಶಿಷ್ಟ ರೀತಿಯಲ್ಲಿ ಶುಭಕೋರಿದ ಸೆಹವಾಗ್!