ಬಿಜೆಪಿ ನಾಯಕನ ಕೊಲೆ ಕೇಸ್: ಸಿಬಿಐನಿಂದ ನಿವೃತ್ತ ಐಪಿಎಸ್ ಅಧಿಕಾರಿ ವಿಚಾರಣೆ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ, ಹುಬ್ಬಳ್ಳಿ-ಧಾರವಾಡ ಮಾಜಿ ಪೊಲೀಸ್ ಆಯುಕ್ತ ಪಾಂಡುರಂಗ ಎಚ್. ರಾಣೆ ಅವರನ್ನು ಸೋಮವಾರ ವಿಚಾರಣೆ ನಡೆಸಿತು. ಸಿಬಿಐ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿರುವ ಸಿಬಿಐ ಕಚೇರಿಗೆ ಬೆಳಗ್ಗೆ ಹಾಜರಾದ ರಾಣೆ ವಿಚಾರಣೆಗೆ ಒಳಗಾದರು. 2017ರಲ್ಲಿ ಸೇವೆಯಿಂದ ನಿವೃತ್ತಿ ಹೊಂದಿರುವ ರಾಣೆ ಅವರು ಯೋಗೀಶ್ ಗೌಡ ಕೊಲೆ ನಡೆದ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದರು. … Continue reading ಬಿಜೆಪಿ ನಾಯಕನ ಕೊಲೆ ಕೇಸ್: ಸಿಬಿಐನಿಂದ ನಿವೃತ್ತ ಐಪಿಎಸ್ ಅಧಿಕಾರಿ ವಿಚಾರಣೆ