ಉತ್ತರಕನ್ನಡ: ರಾಜ್ಯದಲ್ಲಿ ಬರ್ಬರವಾಗಿ ಕೊಲೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಇಂದು ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ದುಷ್ಕರ್ಮಿಗಳ ಕ್ರೌರ್ಯಕ್ಕೆ ಬಲಿಯಾದ ಜೀವಗಳು ಶವಗಳಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಮರ್ಡರ್: ರುಂಡ ಕತ್ತರಿಸಿ, ಶವ ಪೀಸ್ ಪೀಸ್ ಮಾಡಿ ನಾಲೆಗೆಸೆದ ಹಂತಕರು
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ನಾಲ್ವರನ್ನೂ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ ಪರೀಕ್ಷಾರ್ಥಿಗಳಿಗಾಗಿ ರೇಡಿಯೋ ‘ಬಾನ್ದನಿ’ ಪ್ರಸಾರ; ಎಂದಿನಿಂದ ಎಲ್ಲಿಯವರೆಗೆ?
ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರ ಧಾವಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.
ಇದನ್ನೂ ಓದಿ: ರಾಜಧಾನಿಯಲ್ಲಿ ಬಿಬಿಎಂಪಿ ಖಾತಾ ಆಂದೋಲನ, ಆಸ್ತಿವಂತರಿಗೆ ಸದವಕಾಶ: ಎಂದಿನಿಂದ, ಎಲ್ಲೆಲ್ಲಿ?; ಇಲ್ಲಿದೆ ವಿವರ
ಇವರಿನ್ನು ಶಂಕಿತ ಉಗ್ರರು, ಫೆ. 27ರಂದು ಶಿಕ್ಷೆ ಪ್ರಕಟ: ಹಿಂದು ಮುಖಂಡರ ಹತ್ಯೆಗೆ ಸ್ಕೆಚ್, ಮತೀಯ ಗಲಭೆಗೆ ಸಂಚು ಪ್ರಕರಣ