ಮುರುಘೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯ

blank

ಅಥಣಿ: ಸಮೀಪದ ಬಿಳ್ಳೂರು ವಿರಕ್ತಮಠದ ಮಠಾಧೀಶರಾದ ಮ.ನಿ.ಪ್ರ ಮುರುಘೇಂದ್ರ ಮಹಾಸ್ವಾಮೀಜಿ (73) ಶನಿವಾರ ಲಿಂಗೈಕ್ಯರಾದರು.

ಪೂಜ್ಯರು ಬಸವತತ್ತ್ವದ ಪ್ರಸಾರಕರಾಗಿ ತಮ್ಮ ಪ್ರವಚನದ ಮೂಲಕ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಹೆಸರು ಗಳಿಸಿದ್ದರು.

ಬಿಳ್ಳೂರು, ಸಂಕ, ಸಿಂದಗಿ, ಬಸವನ ಬಾಗೇವಾಡಿ, ಬಾಗಲಕೋಟೆ ಮಠ ಹಾಗೂ ಸಂಸ್ಥೆಗಳ ಉಸ್ತುವಾರಿ ವಹಿಸಿಕೊಂಡು ಭಕ್ತರ ಸಹಕಾರದಿಂದ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿದ್ದರು.

ಶ್ರೀಮಠಕ್ಕೆ ಬರುವ ಭಕ್ತರಿಗೆ ಪ್ರಸಾದ, ಆಶ್ರಯ ಕಲ್ಪಿಸುವುದರ ಜತೆಗೆ ಶಿಕ್ಷಣ ಸಂಸ್ಥೆ ಸ್ಥಾಪಿಸಿ ನೂರಾರು ಬಡವಿದ್ಯಾರ್ಥಿಗಳಿಗೆ ವಿದ್ಯಾದಾನ ನೀಡಿದ್ದಾರೆ. ಗೋವು ರಕ್ಷಕರಾಗಿ ಶ್ರೀಮಠದಲ್ಲಿ ಗೋವು ಸಾಕಿ ಪಾಲನೆ ಪೋಷಣೆ ಮಾಡಿದ್ದಾರೆ. ವೀರಶೈವ ಲಿಂಗಾಯತ ಪರಂಪರೆಯಂತೆ ಜ.19ರಂದು ಧಾರ್ಮಿಕ ವಿಧಿವಿಧಾನ ಪ್ರಕಾರ ಅಂತ್ಯಕ್ರಿಯೆ ಸಂಜೆ ಬಿಳ್ಳೂರು ಮಠದ ಆವರಣದಲ್ಲಿ ಜರುಗಲಿದೆ.

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…