More

    ಹಂಸಲೇಖಗೆ ಅನಾರೋಗ್ಯ: ಸ್ವಲ್ಪ ಕಾಲಾವಕಾಶ ಕೊಡಿ ಎಂದು ವಕೀಲರ ಕೋರಿಕೆ

    ಬೆಂಗಳೂರು: ಪೇಜಾವರ ಶ್ರೀವಿಶ್ವೇಶತೀರ್ಥರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿ ವಿವಾದ ಮೈಮೇಲೆ ಎಳೆದುಕೊಂಡಿರುವ ಚಿತ್ರಸಾಹಿತಿ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಅವರು ಒಂದು ವರ್ಗದ ಜನರಿಂದ ತೀವ್ರ ವಿರೋಧವನ್ನು ಎದುರಿಸುವಂತಾಗಿದೆ. ಮಾತ್ರವಲ್ಲ ಅವರ ವಿರುದ್ಧ ದೂರುಗಳೂ ದಾಖಲಾಗಿವೆ.

    ಅಂಥದ್ದೇ ಒಂದು ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಹಂಸಲೇಖಗೆ ನೋಟಿಸ್ ಕಳಿಸಿದ್ದಾರೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಿಂದ ಎರಡೆರಡು ಬಾರಿ ಹಂಸಲೇಖ ಅವರಿಗೆ ನೋಟಿಸ್ ಕಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಬಸವನಗುಡಿ ಪೊಲೀಸ್ ಠಾಣೆಯಿಂದ ಹಂಸಲೇಖ ಅವರಿಗೆ ಎರಡು ದಿನಗಳ ಹಿಂದೆ ಎರಡನೇ ನೋಟಿಸ್ ಜಾರಿಯಾಗಿತ್ತು.

    ಇದನ್ನೂ ಓದಿ: ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!

    ಆದರೆ ಈ ಸಂಬಂಧ ವಿಚಾರಣೆಗೆ ತೆರಳದಿರುವ ಹಂಸಲೇಖ, ಠಾಣೆಗೆ ಹಾಜರಾಗಲು ಸ್ವಲ್ಪ ಕಾಲಾವಕಾಶ ನೀಡುವಂತೆ ತಮ್ಮ ವಕೀಲರ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಹಂಸಲೇಖ ಅವರು ಅನಾರೋಗ್ಯಕ್ಕೀಡಾಗಿದ್ದು, ಸ್ವಲ್ಪ ಕಾಲಾವಕಾಶ ಕೊಡಿ. ನ. 25ರಂದು ಅವರು ಠಾಣೆಗೆ ಹಾಜರಾಗಿ ವಿಚಾರಣೆಗೆ ಸಹಕರಿಸುತ್ತಾರೆ ಎಂದು ಕೋರಿಕೊಂಡಿದ್ದಾರೆ.

    ನಮ್​ ಕಾರು ತೇಲ್ತಿತ್ತು, ಇಂಜಿನ್ನೇ ಆಫ್​ ಆಯ್ತು..; ತಿರುಪತಿಯಲ್ಲಿ ಭಯಂಕರ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದನ್ನು ವಿವರಿಸಿದ ನಟಿ ತಾರಾ

    ಹುಲಿ ಗಣತಿಗೆ ಹೋಗಿದ್ದ ಅರಣ್ಯ ರಕ್ಷಕಿ, ಹೆಣ್ಣು ಹುಲಿಗೆ ಬಲಿ; ಕರ್ತವ್ಯದಲ್ಲಿದ್ದಾಗಲೇ ಸಾವಿಗೀಡಾದ ಫಾರೆಸ್ಟ್ ಗಾರ್ಡ್​

    ಲಗ್ನವಾಗಲು ಹೊರಟ ಯುವತಿ, ವಜ್ರದೇಹಿ ಸ್ವಾಮೀಜಿಯ ಮಧ್ಯಪ್ರವೇಶ: ಈ ಮದ್ವೆ ಬೇಡ ಎಂದು ಆಕೆಯ ಮನವೊಲಿಕೆ; ಕಾರಣ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts