More

    ಹನುಮಂತನ ಮಂದಿರ ನಿರ್ಮಾಣಕ್ಕೆ ಮುಂದಾದ ಮುಸ್ಲಿಂ ಶಾಸಕ

    ಜಾರ್ಖಾಂಡ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷ ಐತಿಹಾಸಿಕ ಗೆಲುವಿನಿಂದ ಹರ್ಷಗೊಂಡಿರುವ ಮುಸ್ಲಿಂ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಅವರು ತಮ್ಮ ವಿಧಾನಸಭಾ ಕ್ಷೇತ್ರವಾದ ಜಮ್ತಾರಾದಲ್ಲಿ ದೇಶದ ಅತಿದೊಡ್ಡ ಹನುಮಾನ್ ಮಂದಿರವನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ.

    ಕಾಂಗ್ರೆಸ್ ಪಕ್ಷದ ಶಾಸಕ ಇರ್ಫಾನ್ ಅನ್ಸಾರಿಯವರು ತಮ್ಮ ವಿಧಾನಸಭಾ ಕ್ಷೇತ್ರವಾದ ಜಮ್ತಾರಾದಲ್ಲಿ ದೇಶದ ಅತಿದೊಡ್ಡ ಹನುಮಾನ್ ಮಂದಿರವನ್ನು ನಿರ್ಮಿಸುವುದಾಗಿ ಹೇಳಿಕೊಂಡಿದ್ದಾರೆ.

    ” ನಾನು ಮೊದಲಿನಿಂದಲೂ ಹನುಮಂತನ ಅನುಯಾಯಿಯಾಗಿದ್ದರೂ, ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐತಿಹಾಸಿಕ ವಿಜಯದ ನಂತರ, ಹನುಮಂತನ ಮೇಲಿನ ನನ್ನ ನಂಬಿಕೆ ಮತ್ತಷ್ಟು ಹೆಚ್ಚಿದೆ. ಹನುಮಂತ ಎಲ್ಲರಿಗೂ ಸೇರಿದವನು. ಪಕ್ಷದ ಗೆಲುವು ಬಳಿಕ ಹನುಮಂತನ ದೇವಸ್ಥಾನಕ್ಕೆ ತೆರಳಿದೆ” ಎಂದು ಅನ್ಸಾರಿಯವರು ಹೇಳಿದ್ದಾರೆ.

    ಇದೇ ವೇಳೆ ದೇವಸ್ಥಾನ ನಿರ್ಮಾಣಕ್ಕೆ ಹಣ ಹೊಂದಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನನ್ನ ಕಿಡ್ನಿ ಮಾರಿಯಾದರೂ ದೇವಸ್ಥಾನ ನಿರ್ಮಾಣ ಮಾಡುತ್ತೇನೆ. ಈಗಾಗಲೇ ದೇವಸ್ಥಾನ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಶೀಘ್ರದಲ್ಲಿಯೇ ನಿರ್ಮಾಣ ಕಾರ್ಯ ಆರಂಭವಾಗಲಿದೆ” ಎಂದಿದ್ದಾರೆ.

    ರಾಜ್ಯದಲ್ಲಿ ಕುಸಿದಿದ್ದ ತಾಪಮಾನ ದಿಢೀರ್ ಹೆಚ್ಚಳ; ಬಿಸಿಲಿನ ಬೇಗೆಗೆ ಜನ ಹೈರಾಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts