More

    ಬೀದಿ ಬದಿ ವ್ಯಾಪಾರಿಗಳನ್ನು ಒಟ್ಟುಗೂಡಿಸಿರುವುದು ಹಸಿವೇ ವಿನಃ ಧರ್ಮ, ಜಾತಿಯಲ್ಲ: ವ್ಯಾಪಾರಿ ಸಂಘಟನೆಗಳ ಆಕ್ರೋಶ

    ಬೆಂಗಳೂರು: ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡಬೇಕೆಂದು ಹಿಂದು ಪರ ಸಂಘಟನೆಗಳ ಆಗ್ರಹದ ವಿರುದ್ಧ ವ್ಯಾಪಾರಿಗಳ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

    ವಿವಿ ಪುರಂ ಸುಬ್ರಹ್ಮಣ್ಯ ದೇವಾಲಯದಲ್ಲಿ ಮುಸ್ಲಿಂ ವ್ಯಾಪಾರಿಗಳ ನಿರ್ಭಂದಕ್ಕೆ ಹಿಂದೂ ಸಂಘಟನೆ ಒತ್ತಾಯ ಹಿನ್ನಲೆ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವ್ಯಾಪಾರ ವಿರೋಧದ ಹೆಸರಲ್ಲಿ ಧರ್ಮವನ್ನ ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಸಂಘ ಟೀಕಿಸಿದೆ.

    ಬೀದಿ ಬದಿ ವ್ಯಾಪಾರಿಗಳನ್ನು ಒಟ್ಟುಗೂಡಿಸಿರುವುದು ಅವರ ಶ್ರಮ ಮತ್ತು ಹಸಿವೇ ವಿನಃ ಧರ್ಮ ಜಾತಿಯಲ್ಲ. ಇಂತಹ ನೀಚ ನಡೆಗಳು ಬೀದಿ ವ್ಯಾಪಾರಿಗಳಲ್ಲಿ ಭಯವನ್ನು ಉಂಟು ಮಾಡಿ, ಜೀವನೋಪಾಯ ಕಸಿದುಹೋಗುವ ಭಯದಲ್ಲಿ ಜೀವಿಸುವಂತಾಗಿದೆ. ಧರ್ಮದ ಹೆಸರಿನಲ್ಲಿ ಈ ರೀತಿ ವ್ಯಾಪಾರ ಬಹಿಷ್ಕಾರ ಹಾಕೋದು ಸಂವಿಧಾನವನ್ನು ವಿರೋಧ ಮಾಡಿದಂತೆ. ಸರ್ಕಾರ ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು. ಧರ್ಮದ ಹೆಸರಿನಲ್ಲಿ ಸಂವಿಧಾನ ವಿರೋಧಿ ಕೆಲಸ ಮಾಡುವವರನ್ನ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದೆ.

    ಪತ್ರಿಕಾ ಪ್ರಕಟಣೆ ಮೂಲಕ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಕ್ರಮಕ್ಕೆ ಆಗ್ರಹಿಸಿದೆ. (ದಿಗ್ವಿಜಯ ನ್ಯೂಸ್​)

    ಕ್ಯಾಮೆರಾ ಮುಂದೆ ಬೆತ್ತಲಾದ ಮಾಡೆಲ್​-ನಟಿ ರಾವಿಶ್ರೀ! ವೈರಲ್​ ಆಯ್ತು ಉಪನ್ಯಾಸಕಿಯ ಹಾಟ್​ ಅವತಾರ

    ಹೆಚ್ಚಿನ ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಸಮಂತಾ ಶಿಫ್ಟ್! ಈ ಸುದ್ದಿ ನಿಜವೇ? ಆಪ್ತ ಮೂಲಗಳು ಹೇಳುವುದೇ ಬೇರೆ

    ಪತಿಯ ಮುಂದೆ ಪ್ರದರ್ಶಿಸು ಸಾರ್ವಜನಿಕರ ಮುಂದಲ್ಲ! ಟ್ರೋಲ್​ಗೆ ಗುರಿಯಾದ ನಿವೇದಿತಾರ ಹೊಸ ಅವತಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts