ನವದೆಹಲಿ: ಅವರಿಗೆ ಸೋಲು ಹೊಸದೇನಲ್ಲ. ಎಷ್ಟೇ ಅಪಹಾಸ್ಯ ಮಾಡಿದರೂ ಛಲ ಬಿಡದೆ, ಗೆಲುವಿಗಾಗಿ ಪ್ರಯತ್ನಿಸುತ್ತೀರುವ ಆಶಾವಾದಿ. ಅವರೇ ಹಸ್ನೂರಾಮ್ ಅಂಬೇಡ್ಕರ್. ಪ್ರಸ್ತುತ ವಯಸ್ಸು 78 ವರ್ಷಗಳು. ಇದುವರೆಗೆ 98 ಬಾರಿ ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಇತ್ತೀಚೆಗಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸಲು ಸಿದ್ಧರಾಗಿದ್ದಾರೆ.
ಹಸ್ನೂರಾಮ್ ಅಂಬೇಡ್ಕರ್ 1985 ರಲ್ಲಿ ಮೊದಲ ಬಾರಿಗೆ ರಾಜ್ಯ ಚುನಾವಣೆಗೆ ಸ್ಪರ್ಧಿಸಿದರು. ಅಂದಿನಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಲೆ ಬರುತ್ತಿದ್ದಾರೆ. ಈ ಬಾರಿ ಮತ್ತೆ ಕಣಕ್ಕೆ ಇಳಿದಿದ್ದಾರೆ. ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಖೇರಗಢ್ನ ಹಸ್ನೂರಾಮ್ ಅಂಬೇಡ್ಕರ್ ಅವರು 100 ಬಾರಿ ಸ್ಪರ್ಧಿಸುವ ಗುರಿ ಹೊಂದಿದ್ದಾರೆ. ನಂತರ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ. ಈಗ ಮತ್ತೆ ನಾಮಪತ್ರ ಕೈಯಲ್ಲಿಟ್ಟುಕೊಂಡು ಆಗ್ರಾ ಮೀಸಲು ಕ್ಷೇತ್ರ ಫತೇಪುರ್ ಸಿಕ್ರಿ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.
ಅಂಬೇಡ್ಕರ್ ಅವರು ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಖೇರಗರ್ ಕ್ಷೇತ್ರದಿಂದ ಮಾರ್ಚ್ 1985 ರಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಅಭ್ಯರ್ಥಿಯ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಗ್ರಾಮ ಪಂಚಾಯಿತಿ, ರಾಜ್ಯ ವಿಧಾನಸಭೆ, ಎಂಎಲ್ ಸಿ, ಎಂಪಿ… ಹೀಗೆ ಪ್ರತಿ ಚುನಾವಣೆಯಲ್ಲೂ ಸ್ಪರ್ಧಿಸುತ್ತಿದ್ದರು. ನಂತರ ಅವರು ಭಾರತದ ರಾಷ್ಟ್ರಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು, ಆದರೆ ತಿರಸ್ಕರಿಸಲಾಯಿತು.
ಬೇರೆಯವರು ನಿಮಗೆ ಮತ ಹಾಕಲ್ಲ ಎಂದು ಅವಮಾನಿಸಬೇಡಿ. ಈ ಅವಮಾನದ ಸೇಡು ತೀರಿಸಿಕೊಳ್ಳಲು ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಜನರಿಂದ ಮತ ಗಳಿಸಬಹುದು ಎಂಬುದನ್ನು ಸಾಬೀತುಪಡಿಸಲು ಹೆಚ್ಚು ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ. 100ನೇ ಬಾರಿಗೆ ಸ್ಪರ್ಧಿಸುವುದು ನನ್ನ ಗುರಿ. ಆ ನಂತರ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅಂಬೇಡ್ಕರ್ ಹೇಳಿದರು.
ತನಗೆ ಐವರು ಗಂಡು ಮಕ್ಕಳಿದ್ದು, ಎಲ್ಲರೂ ಕೂಲಿ ಮಾಡಿ ಮದುವೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ನನ್ನ ಸೊಸೆ, ಮೊಮ್ಮಕ್ಕಳು, ಹೆಣ್ಣುಮಕ್ಕಳು ಎಲ್ಲರೂ ನನ್ನನ್ನು ಪ್ರಚಾರದಲ್ಲಿ ಬೆಂಬಲಿಸುತ್ತಾರೆ ಎಂದು ಹೇಳಿದ್ದಾರೆ.
ಅಂಬೇಡ್ಕರ್ ಅವರು ಡಾ.ಭೀಮರಾವ್ ಅಂಬೇಡ್ಕರ್ ಅವರ ಅನುಯಾಯಿಯಾಗಿದ್ದರು ಮತ್ತು 1977 ರಿಂದ 1985 ರವರೆಗೆ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟದಲ್ಲಿ (BAMCEF) ಸಕ್ರಿಯರಾಗಿದ್ದರು. ಅಂಬೇಡ್ಕರ್ ಅವರು ಸೋಮವಾರ ಎರಡು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ ಮತ ಪ್ರಚಾರ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ನಾಮಪತ್ರ ಸಲ್ಲಿಕೆ ಏಪ್ರಿಲ್ 12 ರಂದು ಆರಂಭವಾಗಲಿದ್ದು, ಏಪ್ರಿಲ್ 19 ರವರೆಗೆ ನಡೆಯಲಿದೆ.
ಕೈನೋವಿನಲ್ಲೂ ಅಂತಿಮ ದರ್ಶನಕ್ಕೆ ಬಂದ ಡಿಬಾಸ್; ದರ್ಶನ್ ಕೈ ಹಿಡಿದು ಬಿಕ್ಕಿ ಬಿಕ್ಕಿ ಅತ್ತ ಸೌಂದರ್ಯ ಜಗದೀಶ್ ಪತ್ನಿ