ನವದೆಹಲಿ: ಮಂಗಳವಾರ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್ ಆಫ್ ಮಾಡಿದ ಕುರಿತು ಕಿಡಿಕಾರಿದ್ದ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಪ್ರತಿಭಟಿಸಿ ಸಭಾತ್ಯಾಗ ಮಾಡಿದ್ದವು.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಉಂಟಾಗಿದೆ ಎಂದಿದ್ದಾರೆ. ಮಣಿಪುರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಜನಾಂಗೀಯ ಘರ್ಷಣೆ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದೆವು. ಆದರೆ, ಮಾತನಾಡುವ ವೇಳೆ ಮೈಕ್ ಆಫ್ ಮಾಡಿರುವ ಕ್ರಮ ಸರಿಯಲ್ಲ ಎಂದು ಕಿಡಿಕಾರಿದ್ಧಾರೆ.
ಇದನ್ನೂ ಓದಿ: ತುಂಗಾ ನದಿ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ
ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇದು ನನ್ನ ಪಾಲಿನ ಅವಕಾಶವನ್ನು ಕಿತ್ತುಕೊಂಡು ಸ್ವಾಭಿಮಾನಕ್ಕೆ ಸವಾಲು ಹಾಕಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ಸದನವನ್ನು ನಡೆಸುವುದು ಪ್ರಜಾಪ್ರಭುತ್ವದ ಉಲ್ಲಂಘನೆಯಾಗುತ್ತದೆ ಎಂದು ಹೇಳಿದ್ದಾರೆ.