ಮೈಸೂರು: ವಿಧವೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಬನ್ನೂರು ಪಟ್ಟಣದ ಭೋವಿ ಕಾಲೋನಿಯಲ್ಲಿ ನಡೆದಿದೆ. ವಿಧವೆಯೊಂದಿಗೆ ಏಕಾಂತದಲ್ಲಿದ್ದಾಗ ಬೇರೊಬ್ಬ ವ್ಯಕ್ತಿ ಅದನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಇದನ್ನೂ ಓದಿ: ಅತ್ತೆಯ ತಲೆ ಒಡೆದು, ಕಣ್ಣು ಕಿತ್ತ ಸೊಸೆ! ಭೀಕರ ಕೊಲೆಯ ಹಿಂದಿದೆ ನೋವಿನ ಕಥೆ
ಸ್ವಾಮಿ ಹೆಸರಿನ ಯುವಕ ವಿಧವೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ಅದೇ ಊರಿನ ಮುಕುಂದನಿಗೆ ತಿಳಿದಿತ್ತು. ಜ.16ರಂದು ರಾತ್ರಿ ಸ್ವಾಮಿ ವಿಧವೆ ಮನೆಗೆ ಹೋಗುವುದನ್ನು ಗಮನಿಸಿದ್ದ. ಅವರಿಬ್ಬರು ಏಕಾಂತದಲ್ಲಿದ್ದಾಗ ಮನೆಗೆ ನುಗ್ಗಿದ ಮೋಹನ್, ಜೋಡಿಯನ್ನು ನಗ್ನಗೊಳಿಸಿ ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿಕೊಂಡಿದ್ದ. ನನ್ನ ಜತೆ ಲೈಂಗಿಕ ಕ್ರಿಯೆಗೆ ಸಹಕರಿಸದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಇದನ್ನೂ ಓದಿ: VIDEO: ಮೀನುಪ್ರಿಯರಿಗೆ ಹಬ್ಬಬೋ ಹಬ್ಬ… ಪುಕ್ಕಟೆ ಸಿಕ್ಕ ‘ಫ್ರೆಷ್’ ಮೀನನ್ನು ಮುಗಿಬಿದ್ದು ಬಾಚಿಕೊಂಡ್ರು…
ಘಟನೆಯಿಂದಾಗಿ ಮನನೊಂದಿದ್ದ ಸ್ವಾಮಿ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಕುಟುಂಬ ಅಂತ್ಯಸಂಸ್ಕಾರ ಮಾಡಿ ಸುಮ್ಮನಾಗಿತ್ತು. ಆದರೆ ಇದೀಗ ಆತನೊಂದಿಗೆ ಸಂಬಂಧದಲ್ಲಿದ್ದ ವಿಧವೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ನಡೆದ ಘಟನೆಯನ್ನು ವಿವರಿಸಿದ್ದು, ಅದೇ ಕಾರಣಕ್ಕೆ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಮ್ಮನ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸ್ವಾಮಿಯ ಸಹೋದರ ಬಾಬು ದೂರು ದಾಖಲಿಸಿದ್ದಾರೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!
ಪ್ಲೀಸ್ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!