ಮೈಸೂರು: ಒಂದು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ ನಗರದ ಶ್ರೀರಾಂಪುರ ಎಸ್ಬಿಎಂ ಕಾಲನಿಯಲ್ಲಿ ನಡೆದಿದೆ.
ಆಶಾರಾಣಿ (28) ಮೃತ ದುರ್ದೈವಿ. ಮೂಲತಃ ನಂಜನಗೂಡು ತಾಲೂಕಿನ ಸರಗೂರು ಗ್ರಾಮದ ನಿವಾಸಿ. ಕೇವಲ ಒಂದು ತಿಂಗಳ ಹಿಂದಷ್ಟೇ ಟಿಕ್ಕಿ ಪ್ರದೀಪ್ ಎಂಬಾತನ ಜತೆ ವಿವಾಹವಾಗಿತ್ತು.
ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಮೃತ ಆಶಾರಾಣಿ ಪೋಷಕರು ಕುವೆಂಪನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವರದಕ್ಷಿಣೆ ತರುವಂತೆ ಮಾನಸಿಕ ದೈಹಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆಂದು ಪ್ರದೀಪ್ ವಿರುದ್ಧ ದೂರು ನೀಡಲಾಗಿದೆ.
5 ಲಕ್ಷ ರೂ. ನಗದು ಮತ್ತು 130 ಗ್ರಾಂ ಚಿನ್ನ ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ, ಮತ್ತಷ್ಟು ವರದಕ್ಷಿಣೆಗಾಗಿ ಪ್ರದೀಪ್, ಮತ್ತವರ ಕುಟುಂಬದ ಬೇಡಿಕೆ ಇಟ್ಟಿತ್ತು ಎಂದು ಆಶಾರಾಣಿ ಕುಟುಂಬ ಆರೋಪಿಸಿದ್ದು, ಪ್ರದೀಪ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)
ಕರೊನಾ ಸೋಂಕಿತ ಪತ್ನಿಯನ್ನೇ ಕೊಲೆ ಮಾಡಿದ ಪತಿ: ಆರೋಪಿ ಹೇಳಿದ್ದನ್ನು ಕೇಳಿ ಬೆಚ್ಚಿಬಿದ್ದ ಪೊಲೀಸರು!
ಆಗಸ್ಟ್ನಲ್ಲಿ ಮಹಾಮಾರಿ ಕರೊನಾ ಮುಕ್ತವಾಗಲಿದೆ ಬ್ರಿಟನ್: ಸರ್ಕಾರದ ವರದಿಯಲ್ಲೇನಿದೆ?
ಉಸಿರು ಕಾಪಾಡಲು ಸಜ್ಜಾಗುತ್ತಿರುವ ಆರೋಗ್ಯ ಇಲಾಖೆ: ರಾಜ್ಯದ ವಿವಿಧೆಡೆ 40 ಆಕ್ಸಿಜನ್ ಉತ್ಪಾದನಾ ಘಟಕ