ಮೈಸೂರು/ಹಾಸನ: ಅರಸಿಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಹಾಗೂ ಸಂಬಂಧಿ ಎನ್.ಆರ್. ಸಂತೋಷ್ ಕಣಕ್ಕಿಳಿಯುವುದು ಖಚಿತವಾಗಿದೆ. ಇನ್ನೊಂದೆಡೆ ವರುಣಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬದಲಾಗಿದ್ದು, ಭಾರತಿ ಶಂಕರ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ.
ಅರಸಿಕೆರೆ ಟಿಕೆಟ್ ಎನ್.ಆರ್.ಸಂತೋಷ್ಗೆ ಫೈನಲ್ ಆಗಿದೆ. ದೇವೇಗೌಡರ ಜತೆ ನಡೆದ ಚರ್ಚೆಯಲ್ಲಿ ಟಿಕೆಟ್ ಅಂತಿಮವಾಗಿದೆ. ಬಾಣಾವರ ಅಶೋಕ್ ಅವರ ಮನವೊಲಿಸಿ ಸಂತೋಷ್ಗೆ ಟಿಕೆಟ್ ಫೈನಲ್ ಮಾಡಲಾಗಿದ್ದು, ಅರಸಿಕೆರೆ ಜೆಡಿಎಸ್ ಅಭ್ಯರ್ಥಿಯಾಗಿ ಸಂತೋಷ್ ಸ್ಫರ್ಧೆ ಖಚಿತವಾಗಿದೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಜತೆ ಚರ್ಚಿಸಿ ಎಚ್ಡಿಡಿ ಅಂತಿಮ ನಿರ್ಣಯ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ಭಯ್ಯಾ ಎನ್ನುತ್ತಿದ್ದೆ ಈಗ ಅವನ ಮಗುವಿಗೆ ತಾಯಿಯಾದೆ! ಮಹಿಳೆಯ ವಿಡಿಯೋ ನೋಡಿ ಹುಬ್ಬೇರಿಸಿದ ನೆಟ್ಟಿಗರು
ವರುಣಾದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಭಿಷೇಕ್ ದಿಢೀರ್ ನಾಪತ್ತೆಯಾಗಿ ಯಾರ ಕೈಗೂ ಸಿಗದ ಹಿನ್ನೆಲೆಯಲ್ಲಿ ಅಭಿಷೇಕ್ ಬದಲು ಭಾರತಿ ಶಂಕರ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾಗಿ ಭಾರತಿ ಶಂಕರ್ ಅವರು ಸ್ಪರ್ಧಿಸಲಿದ್ದಾರೆ. ಬಿಜೆಪಿ ಟಿಕೆಟ್ ಮಿಸ್ ಆಗಿದ್ದಕ್ಕೆ ಭಾರತಿ ಶಂಕರ್ ಅವರು ಜೆಡಿಎಸ್ ಸೇರಿ, ಟಿಕೆಟ್ ಪಡೆದು ಕಣಕ್ಕಿಳಿದಿದ್ದಾರೆ.
ಚಿತ್ರದುರ್ಗದಿಂದ ರಘು ಆಚಾರ್ ಜೆಡಿಎಸ್ ಅಭ್ಯರ್ಥಿ ಆಗಿದ್ದಾರೆ. ಕಾಂಗ್ರೆಸ್ನಿಂದ ಟಿಕೆಟ್ ಸಿಗದಿದ್ದಕ್ಕೆ ರಘು ಆಚಾರ್ ಅವರು ಚಿತ್ರದುರ್ಗದಿಂದ ಕಣಕ್ಕಿಳಿಯುತ್ತಿದ್ದಾರೆ. (ದಿಗ್ವಿಜಯ ನ್ಯೂಸ್)
ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕೆ ನಾಲ್ವರು ಪೊಲೀಸರ ವರ್ಗಾವಣೆ ಮಾಡಿ ಆದೇಶ
ಬಿಜೆಪಿ ಹೈಕಮಾಂಡ್ಗೆ ಡೆಡ್ಲೈನ್ ನೀಡಿದ ಜಗದೀಶ್ ಶೆಟ್ಟರ್! ಮುಜುಗರ ತಪ್ಪಿಸಲು ಕೊಡ್ತಾರಾ ಟಿಕೆಟ್?