ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು(ಶುಕ್ರವಾರ) ಬೆಂಗಳೂರಿಗೆ ಆಗಮಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್ ಎಕ್ಸ್ಪ್ರೆಸ್’ ಮತ್ತು “ಭಾರತ್ ಗೌರವ್ ಕಾಶಿ ದರ್ಶನ್” ರೈಲುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಪ್ರಧಾನಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್-2 ಅನ್ನು ಉದ್ಘಾಟಿಸಿದರು. ಬಳಿಕ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಬೃಹತ್ ಪುತ್ಥಳಿಯನ್ನು ಅನಾವರಣ ಮಾಡಿದರು. ಬಳಿಕ ವಿಮಾನ ನಿಲ್ದಾಣದ ಸಮೀಪದ ಭುವನಹಳ್ಳಿಯಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
Live : ಪ್ರಧಾನಿ ಶ್ರೀ @narendramodi ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ#KarnatakaWelcomesModi #ಬನ್ನಿನಾಡಕಟ್ಟೋಣ #StatueofProsperity https://t.co/TNOCOUgaOT
— BJP Karnataka (@BJP4Karnataka) November 11, 2022