ಎನ್.ಆರ್.ಪುರ: ನಾಗರ ಪಂಚಮಿ ಪ್ರಯುಕ್ತ ಅಗ್ರಹಾರದ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಹಾಗೂ ವಿವಿಧ ನಾಗರಕಟ್ಟೆಗಳಲ್ಲಿ ಶುಕ್ರವಾರ ವಿಶೇಷ ಪೂಜೆ ನಡೆಯಿತು.
ಅಗ್ರಹಾರದ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ನೂರಾರು ಭಕ್ತರು ಆಗಮಿಸಿ ಹಣ್ಣು ಕಾಯಿ ಸರ್ಮಪಿಸಿ ಪೂಜೆ ಸಲ್ಲಿಸಿದರು. ಪವಮಾನ ಅಭಿಷೇಕ, ಎಳನೀರು ಅಭಿಷೇಕ, ಕ್ಷೀರಾಭಿಷೇಕ ನಡೆಯಿತು. ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ವಿಶೇಷವಾಗಿ ಎನ್.ಆರ್.ಪುರ ಶ್ರೀ ವಿರಾಟ್ ವಿಶ್ವಕರ್ಮ ಚಂಡೆ ಬಳಗದವರು ಚಂಡೆ ಬಾರಿಸಿ ಚಂಡೆ ಸೇವೆ ಸಲ್ಲಿಸಿದರು.
ರಾಘವೇಂದ್ರ ಬಡಾವಣೆಯ ಶಕ್ತಿ ಶ್ರೀ ನಾಗದೇವರ ಸನ್ನಿಧಿಯಲ್ಲೂ ನಾಗನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ಎಳನೀರು, ಕ್ಷೀರಾಭಿಷೇಕ ಮಾಡಿಸಿ ಹಣ್ಣು, ಕಾಯಿ ಪೂಜೆ ಸಲ್ಲಿಸಿದರು. ಶಿವಮೊಗ್ಗ ರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ನಾಗ ದೇವರ ಸನ್ನಿಧಿಯಲ್ಲೂ ವಿಶೇಷ ಪೂಜೆ ಸಲ್ಲಿಸಲಾಯಿತು. ಗುತ್ಯಮ್ಮ ದೇವಸ್ಥಾನದ ನಾಗನ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಯಿತು.
ಹಿಳುವಳ್ಳಿ ರಸ್ತೆಯಲ್ಲಿನ ನಾಗರಕಟ್ಟೆಯಲ್ಲಿ ಭಕ್ತರು ಪೂಜೆ ಸಲ್ಲಿಸಿದರು. ಹಳೇ ಅಂಚೆ ಕಚೇರಿ ರಸ್ತೆಯ ನಾಗರಕಟ್ಟೆಗೂ ಭಕ್ತರು ಪೂಜೆ ಸಲ್ಲಿಸಿದರು. ಗ್ರಾಮೀಣ ಭಾಗದಲ್ಲೂ ನಾಗರಕಟ್ಟೆ, ಅಶ್ವತ್ಥ ಕಟ್ಟೆಗಳಿಗೆ ತನಿ ಎರೆದು, ಅರಿಶಿಣ ಹಚ್ಚಿ, ಎಳನೀರು ಅಭಿಷೇಕ ಮಾಡಿಸಿ ಪೂಜೆ ಸಲ್ಲಿಸಿದರು.
ನಾಗರಕಟ್ಟೆಗಳಿಗೆ ವಿಶೇಷ ಪೂಜೆ
You Might Also Like
ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿಕ್ಸ್ | Health Tips
ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…
ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips
ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…
ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker
Pressure Cooker : ಪ್ರೆಶರ್ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…